ಬೆಳಗಾವಿ : ಮರಾಠಿಯಲ್ಲಿ ಮಾತನಾಡಲು ನನಗೆ ಬರುವುದಿಲ್ಲ, ಕನ್ನಡದಲ್ಲಿ ಹೇಳಿ ಎಂದಿದ್ದಕ್ಕೆ ಜನರನ್ನು ಕರೆಸಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯ ಸುಳೇಬಾವಿ – ಬಾಳೇಕುಂದ್ರಿ ಗ್ರಾಮದ ಮಧ್ಯೆ ಗಲಾಟೆ ನಡೆದಿದೆ.
ಬೆಳಗಾವಿಯ ಮಾರಿಹಾಳ ಪೊಲೀಸ್ ಠಾಣೆ (Marihal Police Station, Belagavi) ವ್ಯಾಪ್ತಿಯಲ್ಲಿ KSRTC ಬಸ್ ಕಂಡಕ್ಟರ್ ಮಹದೇವ ಹಲ್ಲೆಗೊಳಗಾದವರು. ಇವರಿಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ (He is being treated at BIMS Hospital, Belagavi)
ಹುಡುಗಿಯೊಬ್ಬಳು ಹುಡುಗನ ಜತೆ ಕುಳಿತಿದ್ದು, ಎರಡು ಟಿಕೆಟ್ ಕೇಳಿದ್ದರು. ಫ್ರೀ ಟಿಕೆಟ್ ಮಹಿಳೆಯರಿಗೆ ಮಾತ್ರ, ಹುಡುಗನಿಗೆ ಟಿಕೆಟ್ ಕೊಡಿ ಎಂದು ಕಂಡಕ್ಟರ್ ಕೇಳಿದ್ದರು. ಆಗ ಮರಾಠಿಯಲ್ಲಿ ಏನೇನೋ ಮಾತನಾಡಿಕೊಂಡಿದ್ದರು ಎನ್ನಲಾಗಿದೆ.
ಆಗ ಕಂಡಕ್ಟರ್ ಮಹದೇವ್, ನನಗೆ ಮರಾಠಿ ಬರಲ್ಲ, ಕನ್ನಡದಲ್ಲಿ ಹೇಳಿ (I don’t know Marathi, tell me in Kannada). ಅವರ ಟಿಕೆಟ್ ಹಣ ನೀಡಿ, ನಿಮ್ಮಿಬ್ಬರಿಗೆ ಬೇರೆ ಬೇರೆ ಟಿಕೆಟ್ ಕೊಡುತ್ತೇನೆ ಎಂದಿದ್ದರು. ಇದಕ್ಕೆ ಕೋಪಗೊಂಡ ಯುವಕ ಜನರನ್ನು ಕರೆಯಿಸಿ, ಬಸ್ ತಡೆದು ಮಹದೇವ್ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಮಹದೇವ್ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಡಿಸಿಪಿ ರೋಹನ್ ಜಗದೀಶ್ (DCP Rohan Jagadish) ಅವರು ಆಸ್ಪತ್ರೆಗೆ ಭೇಟಿ ನೀಡಿ ಕಂಡಕ್ಟರ್ ಮಹದೇವ್ ಅವರಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಲಾಗಿದೆ. ಹಲ್ಲೆ ಮಾಡಿದವರ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ.
Recent Comments