Google search engine
Home Blog Page 19

ಆನೆ ಮೇಲೆ ಅಂಬಾರಿ ಅಲ್ಲಾ, ಬೈಕ್‌ ಮೇಲೆ ಒಂಟೆ ಸವಾರಿ ; ಈ ವಿಡಿಯೋ ನೋಡಿ.!

ಡೆಸ್ಕ್‌ : ಸಾಮಾಜಿಕ  ಜಾಲತಾಣದಲ್ಲಿ ಪ್ರತಿದಿನ ಒಂಬಿಲ್ಲೊಂದು ಚಿತ್ರ-ವಿಚಿತ್ರ ವಿಡಿಯೋಗಳು ವೈರಲ್‌ ಆಗುತ್ತಲೇ ಇರುತ್ತವೆ. ಅವುಗಳಲ್ಲಿ ಕೆಲವು ಸಮಾಜಕ್ಕೆ ಪೂರಕವಾಗಿದ್ದರೆ, ಇನ್ನು ಕೆಲವು ಯುವ ಪೀಳಿಗೆಯನ್ನು ದಾರಿ ತಪ್ಪಿಸುವ, ಸಂಸ್ಕಾರವನ್ನು ಟೀಕಿಸುವ ವಿಡಿಯೋಗಳಾಗಿರುತ್ತವೆ. ಇನ್ನು ಕೆಲವು ಪ್ರಾಣಿ  – ಪಕ್ಷಿಗಳ ಕುರಿತಾಗಿದ್ದರೆ, ಇನ್ನು ಕೆಲವು ನಗೆ ತರಿಸುವಂತ್ತಿರುತ್ತವೆ.

ಇದೀಗ ಅಂತಹದೆ  ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ವಿಡಿಯೋ ನೋಡಿದ ನೆಟ್ಟಿಗರು ಒಂದು ಕ್ಷಣ ಆಶ್ಚರ್ಯ ಪಡುತ್ತಿದ್ದಾರೆ.

ಇದನ್ನು ಓದಿ : ದಿಢೀರನೇ Bigg Boss Season 11ರ ಮನೆಯಿಂದ ಹೊರ ನಡೆದ ಚೈತ್ರಾ ಕುಂದಾಪುರ.!

ಹೌದು, ಒಂದು ಬೈಕ್‌ ಮೇಲೆ ಯುವಕರಿಬ್ಬರು ಒಂಟೆಯನ್ನು ಕುಳಿಸಿಕೊಂಡು ಸವಾರಿ ಮಾಡುತ್ತಿರುವ ವಿಡಿಯೋ ಇದಾಗಿದೆ.

ವಿಡಿಯೋದಲ್ಲೇನಿದೆ :

ಯುವಕರಿಬ್ಬರು ತಮ್ಮ ಬೈಕ್‌ ಮೇಲೆ ಒಂಟೆಯನ್ನು ಕುಳಿಸಿಕೊಂಡು ಆರಾಮವಾಗಿ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದಾರೆ. ಇನ್ನು ಒಂಟೆ ಹಾಯಾಗಿ ಬಾಯಾಡಿಸುತ್ತ ಎಂಜಾಯ್‌ ಮಾಡುತ್ತ ಯುವಕರಿಗೆ ನಾನೇನು ಕಮ್ಮಿ ಇಲ್ಲ ಎಂಬಂತೆ ಫೊಸ್‌ ನೀಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ಇದೇ ರಸ್ತೆಯಲ್ಲಿ ಸಂಚರಿಸುತ್ತಿರುವ ಬೈಕ್‌ ಸವಾರರು ಈ ವಿಚಿತ್ರ ದಶ್ಯವನ್ನು ತಮ್ಮ ಮೊಬೈಲ್‌ ಪೋನ್‌ನಲ್ಲಿ ಸೆರೆ ಹಿಡಿದ್ದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ತಮಾಷೆ ಮತ್ತು ವಿಶಿಷ್ಟ ದೃಶ್ಯವಾದ ಹಿನ್ನಲೆಯಲ್ಲಿಈ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ.

ಇದನ್ನು ಓದಿ : Astrology : ಡಿಸೆಂಬರ್ 04ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಸದ್ಯಕ್ಕೆ ಈ ವಿಡಿಯೋ ಎಲ್ಲಿಯದು, ಯಾರು ಮಾಡಿದ್ದು, ಎಲ್ಲಿ ಮಾಡಿದ್ದು, ಯಾವಾಗ ಮಾಡಿದ್ದು ಎಂಬ ಬಗ್ಗೆ ಯಾವುದೇ ಸ್ಪಷ್ಟನೇ ಇಲ್ಲ. ಆದರೂ ವಿಡಿಯೋ ನೋಡಿದ ನೆಟ್ಟಿಗರು ತಮಾಷೆಯಾಗಿ ಕಾಮೆಂಟ್‌ ಮಾಡುತ್ತಿದ್ದಾರೆ.

ಇಲ್ಲಿದೇ ನೋಡಿ ವಿಡಿಯೋ :

Astrology : ಡಿಸೆಂಬರ್ 04ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜೋತಿಷ್ಯ : 2024 ಡಿಸೆಂಬರ್ 04ರ ಬುಧವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ಹೊಸ ಕೆಲಸಗಳಿಗೆ ಚಾಲನೆ ನೀಡುತ್ತೀರಿ ಸ್ನೇಹಿತರೊಂದಿಗೆ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ಆತ್ಮೀಯರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಬಾಲ್ಯದ ಸ್ನೇಹಿತರನ್ನು ಭೇಟಿ ಮಾಡುತ್ತೀರಿ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ ಇರುತ್ತದೆ.

*ವೃಷಭ ರಾಶಿ*
ಕೈಗೆತ್ತಿಕೊಂಡ ಕೆಲಸಗಳು ಆಶಾದಾಯಕವಾಗಿರುತ್ತವೆ. ಹೊಸ ಕಾಮಗಾರಿಗಳಿಗೆ ಚಾಲನೆ ದೊರೆಯುತ್ತದೆ. ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ಸ್ಥಿರಾಸ್ತಿ ವಿವಾದಗಳ ಇತ್ಯರ್ಥವಾಗುತ್ತವೆ. ಹೊಸ ವಾಹನ ಯೋಗವಿದೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿನ ಸಮಸ್ಯೆಗಳನ್ನು ನಿವಾರಿಸಿ ಮುನ್ನಡೆಯುತ್ತೀರಿ.

ಇದನ್ನು ಓದಿ : ದಿಢೀರನೇ Bigg Boss Season 11ರ ಮನೆಯಿಂದ ಹೊರ ನಡೆದ ಚೈತ್ರಾ ಕುಂದಾಪುರ.!

*ಮಿಥುನ ರಾಶಿ*
ಪ್ರಮುಖ ವ್ಯವಹಾರಗಳಲ್ಲಿ ಅಡಚಣೆಗಳು ಉಂಟಾಗುತ್ತವೆ. ವ್ಯಾಪಾರದಲ್ಲಿ ಖರ್ಚುಗಳು ಹೆಚ್ಚಾಗುತ್ತವೆ. ಆಕಸ್ಮಿಕ ಪ್ರಯಾಣದ ಸೂಚನೆಗಳಿವೆ. ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಮನೆಯ ಹೊರಗೆ ಒತ್ತಡ ಹೆಚ್ಚಾಗುತ್ತದೆ. ವೃತ್ತಿ ಮತ್ತು ಉದ್ಯೋಗಗಳು ನಿರುತ್ಸಾಹ ಗೊಳಿಸುತ್ತವೆ.

*ಕಟಕ ರಾಶಿ*
ಪ್ರಮುಖ ಕೆಲಸವನ್ನು ಮುಂದೂಡುವುದು ಉತ್ತಮ. ವೃತ್ತಿಪರ ವ್ಯವಹಾರದಲ್ಲಿ ನೀವು ಶ್ರಮಕ್ಕೆ ತಕ್ಕ ಫಲಿತಾಂಶ ದೊರೆಯುವುದಿಲ್ಲ. ಸಹೋದರರೊಂದಿಗೆ ಆಸ್ತಿ ವಿವಾದಗಳು ಉಂಟಾಗುತ್ತವೆ. ಮನಸ್ಸಿನ ಶಾಂತಿಗಾಗಿ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಲಾಗುತ್ತದೆ. ನಿರುದ್ಯೋಗ ಪ್ರಯತ್ನಗಳು ನಿಧಾನವಾಗುತ್ತವೆ.

*ಸಿಂಹ ರಾಶಿ*
ಮನೆಯ ಹೊರಗೆ ಹೊಸ ವಿಷಯಗಳನ್ನು ತಿಳಿದುಕೊಳ್ಳುತ್ತೀರಿ. ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಪರಿಚಯಗಳು ಹೆಚ್ಚಾಗುತ್ತವೆ. ಕುಟುಂಬ ಸದಸ್ಯರ ಸಹಾಯ ಮತ್ತು ಬೆಂಬಲ ದೊರೆಯುತ್ತದೆ. ಕೈಗೊಂಡ ಕಾರ್ಯಗಳು ಸುಗಮವಾಗಿ ಸಾಗುತ್ತವೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹ ಸಿಗುತ್ತದೆ.

*ಕನ್ಯಾ ರಾಶಿ*
ಬಾಲ್ಯದ ಸ್ನೇಹಿತರನ್ನು ಭೇಟಿ ಮಾಡಿ ಕಷ್ಟಸುಖಗಳ ಬಗ್ಗೆ ಚರ್ಚಿಸುತ್ತೀರಿ. ಹೊಸ ವಾಹನ ಯೋಗವಿದೆ. ದೀರ್ಘಕಾಲದ ವಿವಾದಗಳಿಂದ ಮುಕ್ತಿ ದೊರೆಯುತ್ತದೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ.

ಇದನ್ನು ಓದಿ : Belagavi : ಖಾನಾಪುರ ಅರಣ್ಯದಲ್ಲಿ ಕರಡಿ ದಾಳಿಗೆ ತುಂಡಾಯ್ತು ರೈತನ ಕಾಲು.!

*ತುಲಾ ರಾಶಿ*
ಹಣಕಾಸಿನ ತೊಂದರೆಗಳು ಕಿರಿಕಿರಿಯನ್ನು ಉಂಟುಮಾಡುತ್ತವೆ. ಹೊಸ ಸಾಲದ ಪ್ರಯತ್ನಗಳು ಅನುಕೂಲಕರವಾಗಿರುವುದಿಲ್ಲ. ಕೌಟುಂಬಿಕ ವ್ಯವಹಾರಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಕೈಗೊಂಡ ಕೆಲಸದಲ್ಲಿ ಅಡಚಣೆಗಳು ಉಂಟಾಗುತ್ತವೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ವ್ಯಾಪಾರ ಉದ್ಯೋಗಗಳು ನಿರಾಶಾದಾಯಕವಾಗಿರುತ್ತವೆ.

*ವೃಶ್ಚಿಕ ರಾಶಿ*
ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ದೂರ ಪ್ರಯಾಣದಲ್ಲಿ ವಾಹನ ಸಮಸ್ಯೆಗಳಿರುತ್ತವೆ, ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಬೇಕು. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ, ವ್ಯಾಪಾರ ವಹಿವಾಟು ಮಂದಗತಿಯಲ್ಲಿ ಸಾಗುತ್ತದೆ. ಉದ್ಯೋಗಗಳಲ್ಲಿ ಸ್ಥಾನ ಚಲನೆ ಸೂಚನೆಗಳಿರುತ್ತವೆ.

*ಧನುಸ್ಸು ರಾಶಿ.*
ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುತ್ತದೆ ಮತ್ತು ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ಶುಭ ಸುದ್ದಿಗಳನ್ನು ತಿಳಿದುಕೊಳ್ಳುತ್ತೀರಿ. ಸ್ನೇಹಿತರೊಂದಿಗೆ ಭೋಜನ ಮತ್ತು ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ರಾಜಕೀಯ ವಲಯಗಳಿಂದ ಅಪರೂಪದ ಆಹ್ವಾನಗಳು ಬರುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಹೆಚ್ಚು ಅನುಕೂಲಕರ ವಾತಾವರಣ ಇರುತ್ತದೆ.

*ಮಕರ ರಾಶಿ*
ಕೌಟುಂಬಿಕ ಸಮಸ್ಯೆಗಳು ಕಿರಿಕಿರಿಯನ್ನು ಉಂಟುಮಾಡುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಅಡೆತಡೆಗಳಿರುತ್ತವೆ. ಆರ್ಥಿಕ ಗೊಂದಲ ಉಂಟಾಗುತ್ತದೆ. ಪ್ರಯಾಣದಲ್ಲಿ ಹಠಾತ್ ಬದಲಾವಣೆಗಳು ಉಂಟಾಗುತ್ತವೆ. ಆರೋಗ್ಯ ವಿಷಯಗಳಿಗೆ ವೈದ್ಯಕೀಯ ಸಮಾಲೋಚನೆ ಅಗತ್ಯವಿದೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಸಮಸ್ಯೆಗಳು ಉಂಟಾಗುತ್ತವೆ.

ಇದನ್ನು ಓದಿ : Astrology : ಡಿಸೆಂಬರ್ 03ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

*ಕುಂಭ ರಾಶಿ*
ಮನೆಯಲ್ಲಿ ಶುಭ ಕಾರ್ಯಗಳನ್ನು ನಿರ್ವಹಿಸುತ್ತೀರಿ. ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ಪ್ರಮುಖ ವ್ಯಕ್ತಿಗಳೊಂದಿಗಿನ ಪರಿಚಯಗಳು ಹೆಚ್ಚಾಗುತ್ತವೆ. ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಉದ್ಯೋಗಿಗಳಿಗೆ ಉನ್ನತ ಹುದ್ದೆಗಳು ದೊರೆಯುತ್ತವೆ.

*ಮೀನ ರಾಶಿ*
ಪ್ರಮುಖ ವಿಷಯಗಳಲ್ಲಿ ಗೊಂದಲ ಉಂಟಾಗುತ್ತವೆ. ಅನಿರೀಕ್ಷಿತ ಪ್ರವಾಸಗಳನ್ನು ಮಾಡಬೇಕಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ವಿವಾದಗಳು ಉಂಟಾಗುತ್ತವೆ. ವೃತ್ತಿಪರ ವ್ಯವಹಾರಗಳು ಮುಂದೆ ಸಾಗದೆ ನಿರಾಶೆ ಉಂಟಾಗುತ್ತವೆ. ನಿರುದ್ಯೋಗಿಗಳಿಗೆ ಅವಕಾಶಗಳು ಸೀಮಿತವಾಗಿರುತ್ತವೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ದಿಢೀರನೇ Bigg Boss Season 11ರ ಮನೆಯಿಂದ ಹೊರ ನಡೆದ ಚೈತ್ರಾ ಕುಂದಾಪುರ.!

0

ಬೆಂಗಳೂರು : ಕನ್ನಡ ಕಿರುತೆರೆ ಬಿಗ್ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ – 11 (Bigg Boss Season 11) ರ ಮನೆಯ ಸದಸ್ಯರು ಹೊಸ, ಹೊಸ ಟಾಸ್ಕ್‌ಗಳಲ್ಲಿ ಭರಪೂರ ಮನರಂಜನೆ ನೀಡುತ್ತಿದ್ದಾರೆ. ಇದೀಗ ಇದು ರೋಚಕ ಘಟ್ಟವನ್ನ ತಲುಪಿದ್ದು, ವೀಕ್ಷಕರನ್ನು ತುದಿಗಾಲಲ್ಲಿ ನಿಲ್ಲುವಂತೆ (viewers stand on their toes) ಮಾಡಿದೆ.

ಬಿಗ್​​ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ (Chaitra Kundapura) ಬಿಗ್ ಬಾಸ್ ಮನೆಯಲ್ಲಿ ಪ್ರಬಲ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದು, ಇದೀಗ ಬಿಗ್‌ಬಾಸ್ ಸೀಸನ್ 11ರ ಮನೆಯಿಂದ ಹೊರ ಬಂದಿದ್ದಾರೆ.

ಇದನ್ನು ಓದಿ : Belagavi : ಖಾನಾಪುರ ಅರಣ್ಯದಲ್ಲಿ ಕರಡಿ ದಾಳಿಗೆ ತುಂಡಾಯ್ತು ರೈತನ ಕಾಲು.!

ಕಾರಣವೇನು.?

ಚೈತ್ರಾ ಕುಂದಾಪುರ & ಗ್ಯಾಂಗ್ ಮೇಲೆ ಬಿಜೆಪಿ (BJP) ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದಬಾಬು ಎಂಬುವವರಿಗೆ ಕೋಟಿ – ಕೋಟಿ ವಂಚಿಸಿದ ಆರೋಪದಲ್ಲಿ ಅವರ ಮೇಲೆ ದೂರು ದಾಖಲಾಗಿತ್ತು. ವಂಚನೆ ಪ್ರಕರಣ (cheating case) ಕ್ಕೆ ಸಂಬಂಧಿಸಿದಂತೆ ಚೈತ್ರಾ ಕೋರ್ಟ್‌ಗೆ ಹಾಜರಾಗಿದ್ದರು.

ಈ ಹಿನ್ನಲೆಯಲ್ಲಿ ಇಂದು (ದಿ.03) ದಿಢೀರನೇ ಬಿಗ್ ಬಾಸ್ ಮನೆಯಿಂದ ಗುಟ್ಟಾಗಿ ಹೊರ ಬಂದಿದ್ದು, 1ನೇ ಎಸಿಎಂಎಂ ಕೋರ್ಟ್​​​ಗೆ (1st ACMM Court) ಹಾಜರಾಗಿದ್ದರು. ಈ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಅರೆಸ್ಟ್ (arrested) ಆಗಿದ್ದು, ಅವರು ವಿಚಾರಣೆ ಎದುರಿಸಿದ್ದರು.

ಇದನ್ನು ಓದಿ : Astrology : ಡಿಸೆಂಬರ್ 03ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು (judge) ಚೈತ್ರಾ ಕುಂದಾಪುರ ಅವರ ಕೇಸ್‌ನ ವಿಚಾರಣೆ (hearing) ಯನ್ನು ಬರುವ ಜನೇವರಿ 13ರಂದು ನಡೆಸುವುದಾಗಿ ಹೇಳಿ ಮುಂದೂಡಿದ್ದಾರೆ. ಕೇಸ್‌ ಮುಂದುವರೆದ ಕಾರಣ ಚೈತ್ರಾ ಕುಂದಾಪುರ ಅವರನ್ನು ಮತ್ತೆ ಬಿಗ್‌ ಬಾಸ್ ಮನೆಯೊಳಗೆ ಕಳುಹಿಸಲಾಗಿದೆ.

ಕೇಸ್‌ ಮುಂದೂಡಿದ ಪರಿಣಾಮ ಚೈತ್ರಾ ಕುಂದಾಪುರ ಅವರಿಗೆ ಸದ್ಯ ಜನವರಿ ರಿಲೀಫ್ (relief) ಸಿಕ್ಕಿದೆ.

Belagavi : ಖಾನಾಪುರ ಅರಣ್ಯದಲ್ಲಿ ಕರಡಿ ದಾಳಿಗೆ ತುಂಡಾಯ್ತು ರೈತನ ಕಾಲು.!

ಬೆಳಗಾವಿ : ಜಿಲ್ಲೆಯ ಖಾನಾಪುರ (Khanapur) ತಾಲೂಕಿನ ಮಾನ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಸೋಮವಾರ ಕರಡಿ ದಾಳಿಯಿಂದ ರೈತನ ಕಾಲು ತುಂಡಾಗಿರುವ ಘಟನೆ ಸೋಮವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಸಂಭವಿಸಿದೆ.

ಕರಡಿ ದಾಳಿಗೆ ಒಳಗಾದ ರೈತನನ್ನು ಮಾನ (Mana) ಗ್ರಾಮದ ಸಖಾರಾಮ ಗಾಂವಕರ (Sakharam Ganvakar) (62) ಎಂದುತಿಳಿದು ಬಂದಿದೆ. ಅದೃಷ್ಟವಶಾತ್ ರೈತ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನು ಓದಿ : Astrology : ಡಿಸೆಂಬರ್ 03ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ರೈತ ಸಖಾರಾಮ ತಮ್ಮ ಪತ್ನಿಯೊಂದಿಗೆ ಜಾನುವಾರುಗಳ ಸಮೇತ ಹೊಲಕ್ಕೆ ಹೊರಟಿದ್ದರು. ಈ ಮಧ್ಯ ಕಾಡುದಾರಿಯಲ್ಲಿ ಕರಡಿ (Bear) ಎದುರಾಗಿದೆ. ಕರಡಿಯನ್ನು ನೋಡುತ್ತಿದ್ದಂತೆಯೇ ಸಖಾರಾಮ ತಮ್ಮ ಪತ್ನಿಯನ್ನು ಮರವೆರಿಸಿದ್ದಾರೆ.

ಇನ್ನೇನು ತಾವೂ ಮರ ಏರಬೇಕು ಎನ್ನುವಷ್ಟರಲ್ಲಿಯೇ ಓಡಿಬಂದ ಕರಡಿ ಎಡಗಾಲನ್ನು (left leg) ಬಾಯಲ್ಲಿ ಹಿಡಿದುಕೊಂಡು ಎಳೆದಾಡಿದೆ‌. ಕರಡಿ ದಾಳಿ ಎದುರಿಸಲು ರೈತ ತಮ್ಮ ಕೈಯಲ್ಲಿದ್ದ ಕೊಯ್ತಾದಿಂದ ಹೊಡೆದಿದ್ದರಿಂದ ಅದು ಓಡಿತು ಎಂದು ಸಖಾರಾಮ ತಿಳಿಸಿದ್ದಾರೆ.

ಇದನ್ನು ಓದಿ : Fungal ಚಂಡಮಾರುತ ಹಿನ್ನೆಲೆ ; ಕರ್ನಾಟಕದ ಈ ಜಿಲ್ಲೆಗಳಿಗೆ ರಜೆ.!

ಕರಡಿ ದಾಳಿಯಿಂದ ತುಂಡಾದ ಕಾಲಿನಿಂದ ತೀವ್ರ ರಕ್ತಸ್ರಾವದ ನಡುವೆಯೇ ರೈತ ಸಖಾರಾಮ ಮೊಬೈಲ್‌ (Mobile phone) ನಿಂದ ಪುತ್ರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ (Forest dept. Staff) ಹಾಗೂ ಊರಿನ ಜನ ಗುಂಪಾಗಿ ರೈತನನ್ನು ಕಾಡಿನಲ್ಲಿ ಹುಡುಕಾಡಲು ಶುರು ಮಾಡಿದರು. ಕೊನೆಗೆ ಸಂಜೆ 5 ಗಂಟೆಗೆ ಅವರನ್ನು ಪತ್ತೆ ಮಾಡಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆಸ್ಪತ್ರೆಯಲ್ಲಿ ಎಡಗಾಲನ್ನು ಕತ್ತರಿಸಿ ಶಸ್ತ್ರಚಿಕಿತ್ಸೆ (Operation) ಮಾಡಲಾಗಿದೆ ಎಂದು ಖಾನಾಪುರ ಎಸಿಎಫ್ (ACF) ಸುನೀತಾ ನಿಂಬರಗಿ ತಿಳಿಸಿದ್ದಾರೆ. ಕಣಕುಂಬಿ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.

Astrology : ಡಿಸೆಂಬರ್ 03ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜೋತಿಷ್ಯ : 2024 ಡಿಸೆಂಬರ್ 03ರ ಮಂಗಳವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ಕೈಗೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ. ಹೊಸ ವಸ್ತು ವಸ್ತ್ರಗಳನ್ನು ಪಡೆಯುತ್ತೀರಿ.ಬಾಲ್ಯದ ಸ್ನೇಹಿತರನ್ನು ಭೇಟಿಯಾಗಿ ಭೋಜನ ಮತ್ತು ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರಗಳು ಹೆಚ್ಚು ನಿಧಾನವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಕೆಲಸದ ಒತ್ತಡದಿಂದ ಮುಕ್ತಿ ಪಡೆಯುತ್ತೀರಿ.

*ವೃಷಭ ರಾಶಿ*
ಕೈಗೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ಸಹೋದರರೊಂದಿಗೆ ಭೂ ವಿವಾದವಿರುತ್ತದೆ. ಸಂಬಂಧಿಕರೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ. ದೈವಿಕ ಸೇವಾ ಕಾರ್ಯಕ್ರಮಗಳ ಮೇಲೆ ಕೇಂದ್ರೀಕರಿಸುತ್ತೀರಿ. ವ್ಯಾಪಾರದಲ್ಲಿ ಕೆಲವು ನಿರ್ಧಾರಗಳು ನಷ್ಟಕ್ಕೆ ಕಾರಣವಾಗುತ್ತವೆ. ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ.

ಇದನ್ನು ಓದಿ : Fungal ಚಂಡಮಾರುತ ಹಿನ್ನೆಲೆ ; ಕರ್ನಾಟಕದ ಈ ಜಿಲ್ಲಗಳಿಗೆ ರಜೆ.!

*ಮಿಥುನ ರಾಶಿ*
ಕೌಟುಂಬಿಕ ವಿಚಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಸಹೋದರರೊಂದಿಗೆ ದೃಢವಾದ ಒಪ್ಪಂದಗಳನ್ನು ಮಾಡಿಕೊಳ್ಳುತ್ತೀರಿ. ದೂರದ ಸಂಬಂಧಿಕರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಪಾಲುದಾರಿಕೆ ವ್ಯವಹಾರಗಳಿಗೆ ಸಕಾಲದಲ್ಲಿ ಹೂಡಿಕೆಗಳು ದೊರೆಯುತ್ತವೆ. ಉದ್ಯೋಗದ ವಾತಾವರಣ ಶಾಂತಿಯುತವಾಗಿರುತ್ತದೆ.

*ಕಟಕ ರಾಶಿ*
ಆಪ್ತ ಸ್ನೇಹಿತರಿಂದ ಆರ್ಥಿಕ ಒತ್ತಡ ಹೆಚ್ಚಾಗುತ್ತದೆ. ಮನೆಯ ಹೊರಗೆ ಗೊಂದಲಮಯ ವಾತವರಣ ಇರುತ್ತದೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಕುಟುಂಬ ಸದಸ್ಯರೊಂದಿಗೆ ವಿವಾದ ಉಂಟಾಗುತ್ತದೆ. ಅನಾರೋಗ್ಯದ ಸಮಸ್ಯೆಗಳು ಕಿರಿಕಿರಿಯುಂಟುಮಾಡುತ್ತವೆ. ಉದ್ಯೋಗದಲ್ಲಿ ಋಣಾತ್ಮಕ ವಾತಾವರಣವಿರುತ್ತದೆ. ವೃತ್ತಿಪರ ವ್ಯವಹಾರಗಳು ಋಣಾತ್ಮಕ ವಾತವರಣ ಇರುತ್ತದೆ.

*ಸಿಂಹ ರಾಶಿ*
ಪ್ರಮುಖ ವ್ಯವಹಾರಗಳು ನಿಧಾನವಾಗಿ ಪೂರ್ಣಗೊಳ್ಳುತ್ತವೆ. ಕುಟುಂಬ ಸದಸ್ಯರಿಂದ ನಿರೀಕ್ಷಿತ ಆರ್ಥಿಕ ಸಹಾಯ ದೊರೆಯುತ್ತದೆ. ಸಹೋದರರೊಂದಿಗೆ ಕುಟುಂಬದ ವಿಷಯಗಳನ್ನು ಚರ್ಚಿಸುತ್ತೀರಿ. ದೂರದ ಸಂಬಂಧಿಕರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ವ್ಯಾಪಾರಗಳು ಲಾಭದ ಹಾದಿಯಲ್ಲಿ ಸಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗಿನ ವಿವಾದಗಳು ರಾಜಿಯಾಗುತ್ತವೆ.

*ಕನ್ಯಾ ರಾಶಿ*
ಬರಬೇಕಾದ ಹಣ ಸಕಾಲದಲ್ಲಿ ವಸೂಲಿಯಾಗುತ್ತದೆ. ಆತ್ಮೀಯರೊಂದಿಗೆ ಮನೆಯಲ್ಲಿ ಸಂತೋಷದಿಂದ ಕಳೆಯುತ್ತೀರಿ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ವಿಶೇಷವಾಗಿ ಭಾಗವಹಿಸುತ್ತೀರಿ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ವೃತ್ತಿಪರ ನಿರ್ಧಾರಗಳನ್ನು ಕಾರ್ಯಗತಗೊಳಿ, ಲಾಭವನ್ನು ಪಡೆಯುತ್ತೀರಿ. ಉದ್ಯೋಗಿಗಳ ಕಾರ್ಯವೈಖರಿಗೆ ಅಧಿಕಾರಿಗಳಿಂದ ಪ್ರಶಂಸೆ ಪಡೆಯುತ್ತೀರಿ.

ಇದನ್ನು ಓದಿ : Accident : ರಸ್ತೆ ಅಪಘಾತದಲ್ಲಿ ತಂದೆ – ಮಗ ಸಾವು.!

*ತುಲಾ ರಾಶಿ*
ಹಳೇ ಸಾಲ ತೀರಿಸಾಲು ಹೊಸ ಸಾಲ ಪ್ರಯತ್ನಗಳನ್ನು ಮಾಡುತ್ತೀರಿ . ಬಂಧು ಮಿತ್ರರೊಂದಿಗೆ ಸಣ್ಣಪುಟ್ಟ ವಿವಾದ ಉಂಟಾಗುತ್ತದೆ. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ವ್ಯವಹಾರದಲ್ಲಿ ಆತುರದ ನಿರ್ಧಾರಗಳು ಒಳ್ಳೆಯದಲ್ಲ. ನಿರುದ್ಯೋಗ ಪ್ರಯತ್ನಗಳು ನಿರುತ್ಸಾಹಗೊಳಿಸುತ್ತವೆ. ಉದ್ಯೋಗಿಗಳಿಗೆ ಶ್ರಮ ತಕ್ಕ ಫಲ ಸಿಗುವುದಿಲ್ಲ.

*ವೃಶ್ಚಿಕ ರಾಶಿ*
ಕೈಗೆತ್ತಿಕೊಂಡ ಕೆಲಸಗಳು ಶ್ರಮದಿಂದಲೂ ಪೂರ್ಣಗೊಳ್ಳುವುದಿಲ್ಲ, ಕೆಲವು ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದ ಉಂಟಾಗುತ್ತದೆ. ಆರ್ಥಿಕ ಪರಿಸ್ಥಿತಿ ನಿರಾಶಾದಾಯಕವಾಗಿರುತ್ತದೆ. ಭೂಮಿಗೆ ಸಂಬಂಧಿಸಿದ ವಿವಾದಗಳು ಸ್ವಲ್ಪ ಒತ್ತಡಗಳು ಉಂಟಾಗುತ್ತವೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ಹೊಸ ವ್ಯವಹಾರಗಳನ್ನು ಪ್ರಾರಂಭಿಸಲು ಅಡೆತಡೆಗಳು ಉಂಟಾಗುತ್ತವೆ. ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಕೆಲಸದ ಒತ್ತಡ ಹೆಚ್ಚಾಗುತ್ತದೆ.

*ಧನುಸ್ಸು ರಾಶಿ*
ಸಮಾಜದಲ್ಲಿ ಪ್ರಮುಖ ವ್ಯಕ್ತಿಗಳೊಂದಿಗೆ ಹೊಸ ಪರಿಚಯ ಉಂಟಾಗುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಬರಬೇಕಾದ ಹಣ ಸಕಾಲಕ್ಕೆ ದೊರೆಯುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ಯಶಸ್ವಿಯಾಗುತ್ತೀರಿ. ಸ್ಥಿರಾಸ್ತಿ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರೀಕ್ಷೆಗಳು ಈಡೇರುತ್ತವೆ.

*ಮಕರ ರಾಶಿ*
ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಹರಿಸುತ್ತೀರಿ. ಪ್ರಮುಖ ರಾಜಕೀಯ ವ್ಯಕ್ತಿಗಳಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ಕೈಗೊಂಡ ಕೆಲಸದಲ್ಲಿ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ. ಭೂಮಿಗೆ ಸಂಬಂಧಿಸಿದ ಖರೀದಿ ಮತ್ತು ಮಾರಾಟ ಲಾಭದಾಯಕವಾಗಿರುತ್ತದೆ. ವ್ಯಾಪಾರಗಳು ವಿಸ್ತರಿಸುತ್ತವೆ ಮತ್ತು ಉದ್ಯೋಗಗಳಲ್ಲಿ ಉನ್ನತ ಸ್ಥಾನಗಳನ್ನು ಪಡೆಯುತ್ತೀರಿ.

ಇದನ್ನು ಓದಿ : Astrology : ಡಿಸೆಂಬರ್ 02ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

*ಕುಂಭ ರಾಶಿ*
ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ಪ್ರಯಾಣದಲ್ಲಿ ರಸ್ತೆ ತಡೆಗಳು ಉಂಟಾಗುತ್ತವೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಕುಟುಂಬ ಸದಸ್ಯರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ದೈಹಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು ಕಿರಿಕಿರಿಯನ್ನುಂಟುಮಾಡುತ್ತವೆ. ವ್ಯಾಪಾರವು ನಿಧಾನವಾಗುತ್ತದೆ ಮತ್ತು ಉದ್ಯೋಗದ ವಾತಾವರಣವು ಕಿರಿಕಿರಿಯುಂಟುಮಾಡುತ್ತದೆ.

*ಮೀನ ರಾಶಿ*
ಕುಟುಂಬ ಸದಸ್ಯರ ವರ್ತನೆಯಿಂದ ಸ್ವಲ್ಪ ಕಿರಿಕಿರಿ ಉಂಟಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಖರ್ಚು ಮತ್ತು ಶ್ರಮ ಹೆಚ್ಚಾಗುತ್ತದೆ. ಆತ್ಮೀಯ ಸ್ನೇಹಿತರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ನಿರಾಶಾದಾಯಕವಾಗಿರುತ್ತವೆ. ಬಾಲ್ಯದ ಸ್ನೇಹಿತರೊಂದಿಗೆ ದೈವಿಕ ದರ್ಶನಗಳನ್ನು ಪಡೆಯುತ್ತೀರಿ. ವೃತ್ತಿಪರ ಉದ್ಯೋಗಗಳು ಸಾಮಾನ್ಯವಾಗಿ ಸಾಗುತ್ತವೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Fungal ಚಂಡಮಾರುತ ಹಿನ್ನೆಲೆ ; ಕರ್ನಾಟಕದ ಈ ಜಿಲ್ಲೆಗಳಿಗೆ ರಜೆ.!

ಬೆಂಗಳೂರು : ಫೆಂಗಲ್‌ ಚಂಡಮಾರುತ (Cyclone Fengal) ಹಾಗೂ ನೈಋುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರ್ನಾಟಕಕ್ಕೂ ಬಿಸಿ ತಟ್ಟಿದೆ.

ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದೆ. ಫಂಗಲ್ ಚಂಡಮಾರುತದಿಂದ ಅವಾಂತರಗಳೇ ಸೃಷ್ಟಿಯಾಗಿದ್ದು, ನಾಳೆಯೂ (tomorrow) ಸಹ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನು ಓದಿ : Astrology : ಡಿಸೆಂಬರ್ 02ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಫಂಗಲ್ ಚಂಡಮಾರುತದ ಪರಿಣಾಮ ಕೊಡಗು, ಕೋಲಾರ, ದಕ್ಷಿಣ ಕನ್ನಡ ಸೇರಿದಂತೆ ಇತರೆ ಹಲವು ಜಿಲ್ಲೆಯಾದ್ಯಂತ (across many districts) ನಾಳೆ (ದಿ. 03) ಯು ಸಹ ಮಳೆರಾಯನ ಆರ್ಭಟ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ರಜೆ ಘೋಷಿಸಿದ ಜಿಲ್ಲೆಗಳು :
* ಕೋಲಾರ ಜಿಲ್ಲೆ,
* ರಾಮನಗರ ಜಿಲ್ಲೆ,
* ಮೈಸೂರು ಜಿಲ್ಲೆ,
* ಮಂಡ್ಯ ಜಿಲ್ಲೆ,
* ಚಿಕ್ಕಮಗಳೂರು ಜಿಲ್ಲೆ,
* ಚಿಕ್ಕಬಳ್ಳಾಪುರ,
* ದಕ್ಷಿಣ ಕನ್ನಡ ಜಿಲ್ಲೆ,
* ಚಾಮರಾಜನಗರ ಜಿಲ್ಲೆ ಮತ್ತು
* ಉಡುಪಿ‌ ಜಿಲ್ಲೆ.

ಇದನ್ನು ಓದಿ : Accident : ರಸ್ತೆ ಅಪಘಾತದಲ್ಲಿ ತಂದೆ – ಮಗ ಸಾವು.!

ಇನ್ನು ಉತ್ತರ ಒಳನಾಡಿದ ಬೀದರ್‌, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು ಸೇರಿದಂತೆಗೆ ಹಲವು ಜಿಲ್ಲೆಗಳಲ್ಲಿ ಕೆಲವೆಡೆ ಪ್ರತ್ಯೇಕವಾಗಿ ಅಲ್ಲಲ್ಲಿ ಸಾಧಾರಣ (normal) ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Meteorological Department) ನೀಡಿದೆ.

Accident : ರಸ್ತೆ ಅಪಘಾತದಲ್ಲಿ ತಂದೆ – ಮಗ ಸಾವು.!

ಹಾಸನ : ಹಾಸನ ಜಿಲ್ಲೆಯ ಚನ್ನರಾಯಪಟ್ಟಣ (Channarayapatna of Hassan district) ತಾಲ್ಲೂಕಿನ ಅಮಾನಿಕೆರೆ ಸಮೀಪ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ- ಮಗ ಸಾವನ್ನಪ್ಪಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿರುವ (serious injuries) ಘಟನೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರು ರಾಕೇಶ್ (28) ಹಾಗೂ ಮೋಕ್ಷಿತ್‌ ಗೌಡ (8) ಎಂದು ತಿಳಿದು ಬಂದಿದೆ. ಆಶಾ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನು ಓದಿ : Astrology : ಡಿಸೆಂಬರ್ 02ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಈ ಮೂವರು ಕಾರಿನಲ್ಲಿ ಚನ್ನರಾಯಪಟ್ಟಣದಿಂದ ಶ್ರವಣೇರಿ ಗ್ರಾಮಕ್ಕೆ ಹೋಗುತ್ತಿದ್ದರು (He was going to Sravaneri village from Channarayapatna) ಎಂಬ ಮಾಹಿತಿ ಲಭ್ಯವಾಗಿದೆ.

ಅಮಾನಿಕೆರೆ ಸಮೀಪ ಹೋಗುತ್ತಿದ್ದ ವೇಳೆ ಬ್ರೇಕ್ ಫೇಲ್ ಆದ ಕಾರು (car with brake failure) ಎದುರುಗಡೆಯಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಬಳಿಕ ಮರಕ್ಕೆ ಹೊಡೆದಿದೆ ಎನ್ನಲಾಗಿದೆ.

ಇದನ್ನು ಓದಿ : ದುರುಳರಿಂದ ಉದ್ಯಮಿಯ ಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ.!

ಪರಿಣಾಮ ತಂದೆ- ಮಗ ಸ್ಥಳದಲ್ಲೇ (Father and son died on the spot) ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.

ಚನ್ನರಾಯಪಟ್ಟಣ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Astrology : ಡಿಸೆಂಬರ್ 02ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜೋತಿಷ್ಯ : 2024 ಡಿಸೆಂಬರ್ 02ರ ಸೋಮವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ದೂರದ ಬಂಧುಗಳಿಂದ ವಿವಾದಗಳಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ದೊರೆಯುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾದರೂ ನಿಧಾನಗತಿಯಲ್ಲಿ ಪೂರ್ಣಗೊಳಿಸುತ್ತೀರಿ. ಆರ್ಥಿಕ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಅನುಕೂಲಕರವಾಗಿರುತ್ತದೆ. ವೃತ್ತಿಪರ ಉದ್ಯೋಗದ ವಿಷಯಗಳಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ಯಶಸ್ವಿಯಾಗುತ್ತದೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ.

*ವೃಷಭ ರಾಶಿ*
ಅನ್ಯರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತದೆ. ಕುಟುಂಬ ಸದಸ್ಯರು ನಿಮ್ಮ ಮಾತಿಗೆ ಒಪ್ಪುವುದಿಲ್ಲ. ಮಕ್ಕಳ ಆರೋಗ್ಯ ವಿಷಯದಲ್ಲಿ ವೈದ್ಯಕೀಯ ಸಮಾಲೋಚನೆ ಅಗತ್ಯ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಬೆಲೆಬಾಳುವ ವಸ್ತುಗಳ ವಿಷಯದಲ್ಲಿ ಹೆಚ್ಚಿನ ಕಾಳಜಿ ಅಗತ್ಯ. ದೈವಿಕ ಚಿಂತನೆ ಹೆಚ್ಚಾಗುತ್ತದೆ.

ಇದನ್ನು ಓದಿ : Astrology : ಡಿಸೆಂಬರ್ 01ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

*ಮಿಥುನ ರಾಶಿ*
ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಮಾತೃಪ್ರಧಾನ ವರ್ಗದ ಸಂಬಂಧಿಕರೊಂದಿಗೆ ವಿವಾದಗಳಿರುತ್ತವೆ. ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತದೆ. ಕೈಕೊಂಡ ಪ್ರತಿಯೊಂದು ಕೆಲಸದಲ್ಲೂ ಅಡೆತಡೆಗಳು ಉಂಟಾಗುತ್ತದೆ. ವೃತ್ತಿಪರ ವ್ಯವಹಾರಗಳು ಮಿಶ್ರ ಫಲಿತಾಂಶಗಳನ್ನು ಹೊಂದಿರುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಕಟಕ ರಾಶಿ*
ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಮಾತೃಪ್ರಧಾನ ವರ್ಗದ ಸಂಬಂಧಿಕರೊಂದಿಗೆ ವಿವಾದಗಳಿರುತ್ತವೆ. ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತದೆ. ಕೈಕೊಂಡ ಪ್ರತಿಯೊಂದು ಕೆಲಸದಲ್ಲೂ ಅಡೆತಡೆಗಳು ಉಂಟಾಗುತ್ತದೆ. ವೃತ್ತಿಪರ ವ್ಯವಹಾರಗಳು ಮಿಶ್ರ ಫಲಿತಾಂಶಗಳನ್ನು ಹೊಂದಿರುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಸಿಂಹ ರಾಶಿ*
ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ವಿಳಂಬ ಉಂಟಾಗುತ್ತದೆ. ಹಣಕಾಸಿನ ತೊಂದರೆಗಳು ಉಂಟಾಗುತ್ತದೆ. ಮನೆಯ ಹೊರಗೆ ದೀರ್ಘಕಾಲದ ಸಮಸ್ಯೆಗಳು ಕಿರಿಕಿರಿ ಉಂಟುಮಾಡುತ್ತವೆ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಸ್ವಂತ ಆಲೋಚನೆಗಳು ಕೂಡಿ ಬರುವುದಿಲ್ಲ. ದೈವಿಕ ಚಿಂತನೆ ಮೂಡುತ್ತದೆ.

*ಕನ್ಯಾ ರಾಶಿ*
ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಮನೆಯ ಹೊರಗೆ ಸಮಸ್ಯೆಗಳನ್ನು ನಿಧಾನವಾಗಿ ಪರಿಹರಿಸಲಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ನಷ್ಟವನ್ನು ನಿವಾರಿಸಿ ಲಾಭವನ್ನು ಗಳಿಸಲಾಗುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಮಾತನಾಡುವಾಗ ಎಚ್ಚರದಿಂದಿರಿ. ಸ್ಥಿರಾಸ್ತಿ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ.

ಇದನ್ನು ಓದಿ : ದುರುಳರಿಂದ ಉದ್ಯಮಿಯ ಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ.!

*ತುಲಾ ರಾಶಿ*
ಪ್ರಮುಖ ವ್ಯವಹಾರಗಳಲ್ಲಿ ಅನಿರೀಕ್ಷಿತ ತೊಂದರೆಗಳು ಎದುರಾಗುತ್ತವೆ. ದೂರದ ದೇಶಕ್ಕೆ ಪ್ರಯಾಣ ಮಾಡಬೇಕಾಗಿರುವುದರಿಂದ ಅನಿರೀಕ್ಷಿತ ವೆಚ್ಚಗಳು ಹೆಚ್ಚಾಗುತ್ತದೆ. ನಿರುದ್ಯೋಗಿಗಳ ಪ್ರಯತ್ನಗಳು ನಿರಾಶೆಗೊಳಿಸುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಆತುರದಿಂದ ಇತರರೊಂದಿಗೆ ಮಾತನಾಡುವುದು ಒಳ್ಳೆಯದಲ್ಲ. ವ್ಯಾಪಾರದಲ್ಲಿ ಸಣ್ಣ ನಷ್ಟಗಳು ಉಂಟಾಗುತ್ತವೆ.

*ವೃಶ್ಚಿಕ ರಾಶಿ*
ಆದಾಯದ ಮೂಲಗಳು ಹೆಚ್ಚಾಗುತ್ತವೆ. ಕೆಲವು ಸಮಸ್ಯೆಗಳನ್ನು ಇತರರ ಸಹಾಯದಿಂದ ಪರಿಹರಿಸಬಹುದು. ದೀರ್ಘಾವಧಿ ಸಾಲವನ್ನು ಇತ್ಯರ್ಥಗೊಳಿಸುತ್ತೀರಿ. ಮಕ್ಕಳಿಗೆ ಹೊಸ ಶೈಕ್ಷಣಿಕ ಉದ್ಯೋಗಾವಕಾಶಗಳು ದೊರೆಯುತ್ತವೆ. ದೈಹಿಕ ಮತ್ತು ಮಾನಸಿಕ ಪ್ರಶಾಂತತೆ ದೊರೆಯುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಅಧಿಕಾರಿಗಳ ಬೆಂಬಲ ದೊರೆಯುತ್ತದೆ.

*ಧನುಸ್ಸು ರಾಶಿ*
ಸುತ್ತಮುತ್ತಲಿನವರೊಂದಿಗೆ ಸ್ಥಿರಾಸ್ತಿ ವಿವಾದ ಉಂಟಾಗುತ್ತದೆ. ಉದ್ಯೋಗಿಗಳಿಗೆ ಉನ್ನತ ಹುದ್ದೆಗಳು ದೊರೆಯುತ್ತವೆ. ಕೆಲವು ವ್ಯವಹಾರಗಳಲ್ಲಿ ಆತ್ಮ ವಿಶ್ವಾಸದಿಂದ ದೃಢ ನಿರ್ಧಾರಗಳನ್ನು ತೆಗೆದುಕೊಂಡು ಲಾಭವನ್ನು ಪಡೆಯುತ್ತೀರಿ. ನಿರುದ್ಯೋಗಿಗಳು ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಮನೆಯ ಹೊರಗೆ ಗೌರವ ಹೆಚ್ಚಾಗುತ್ತದೆ.

*ಮಕರ ರಾಶಿ*
ಸಮಾಜದಲ್ಲಿ ಕೀರ್ತಿ ಹೆಚ್ಚಾಗುತ್ತದೆ. ಮನೆ ನಿರ್ಮಾಣ ಕೆಲಸಗಳು ಆರಂಭಗೊಳಿಸುತ್ತೀರಿ. ವೃತ್ತಿ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಮಕ್ಕಳ ವಿವಾಹ ಉದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ಆರ್ಥಿಕ ವಾತಾವರಣ ಅನುಕೂಲಕರವಾಗಿರುತ್ತದೆ. ಮಕ್ಕಳ ಆರೋಗ್ಯದ ಬಗ್ಗೆ ಶುಭ ಸುದ್ದಿ ಸಿಗುತ್ತದೆ.

ಇದನ್ನು ಓದಿ : ಫಂಗಲ್ ಚಂಡಮಾರುತ ; ಕರ್ನಾಟಕ ಸೇರಿ ದೇಶದ ಏಳು ರಾಜ್ಯಗಳಿಗೆ Red alert.! 

*ಕುಂಭ ರಾಶಿ*
ಯೋಜಿತ ಸಮಯಕ್ಕೆ ಯೋಜಿತ ರೀತಿಯಲ್ಲಿ ಸೌಲಭ್ಯಗಳು ಸಿಗದೆ ತೊಂದರೆ ಅನುಭವಿಸುತ್ತೀರಿ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ಹಣದ ಬಗ್ಗೆ ಇತರರಿಗೆ ಮಾತು ಕೊಡುವುದು ಒಳ್ಳೆಯದಲ್ಲ. ವೃತ್ತಿಪರ ಉದ್ಯೋಗಗಳಲ್ಲಿ ಸ್ಥಿರತೆಯ ಕೊರತೆ ಇರುತ್ತದೆ. ಕೆಲವರ ವರ್ತನೆಯು ಮಾನಸಿಕವಾಗಿ ಹೆಚ್ಚು ನೋವುಂಟು ಮಾಡುತ್ತದೆ.

*ಮೀನ ರಾಶಿ*
ಕುಟುಂಬದ ಸದಸ್ಯರಿಂದ ಶುಭ ಸುದ್ದಿ ಸಿಗುತ್ತದೆ.ಹೊಸ ವಾಹನ ಖರೀದಿ ನಡೆಯುತ್ತದೆ. ನಿಮ್ಮ ಮನೆಯ ಹೊರಗೆ ನಿಮ್ಮ ಮೌಲ್ಯ ಹೆಚ್ಚಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಮನೆಗೆ ಬಂಧುಗಳ ಆಗಮನ ಸಂತಸ ತರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಸಹೋದ್ಯೋಗಿಗಳ ಸಹಾಯದಿಂದ ಕೆಲವು ಕೆಲಸಗಳು ಪೂರ್ಣಗೊಳ್ಳುತ್ತವೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ದುರುಳರಿಂದ ಉದ್ಯಮಿಯ ಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ.!

ಪಾಟ್ನಾ : ಹಿರಿಯ ಉದ್ಯಮಿಯೊಬ್ಬರನ್ನು ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಗುಂಡಿಕ್ಕಿ ಹತ್ಯೆ ಮಾಡಿದ ಭಯಾನಕ ಘಟನೆಯೊಂದು
ಪಾಟ್ನಾದ (Patna) ದಾನಪುರ ಪ್ರದೇಶದಲ್ಲಿ ಇತ್ತೀಚೆಗೆ ನಡೆದಿದೆ.

ಉದ್ಯಮಿ ಮನೆಯೊಳಗೆ ಕಾಲಿಡುತ್ತಿದ್ದಂತೆ ರಸ್ತೆಯುದ್ದಕ್ಕೂ ಆರು ಜನ (six members) ಹಿಂಬಾಲಿಸಿಕೊಂಡು ಬಂದು ಹಲವು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಈ ಘಟನಾವಳಿಗಳು ಸಿಸಿಟಿವಿ (CCTV) ಯಲ್ಲಿ ಸೆರೆಯಾಗಿದ್ದು, ಸದ್ಯ ದೃಶ್ಯಾವಳಿಗಳು ವೈರಲ್ ಆಗಿವೆ.

ಇದನ್ನು ಓದಿ : Astrology : ಡಿಸೆಂಬರ್ 01ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಹತ್ಯೆಯಾದ ಉದ್ಯಮಿಯನ್ನು 60 ವರ್ಷದ ಪರಾಸ್ ರೈ (Paras Rai) ಎಂದು ಗುರುತಿಸಲಾಗಿದ್ದು, ಎರಡು ದ್ವಿಚಕ್ರವಾಹನಗಳಲ್ಲಿ ಆರು ಮಂದಿ ಶಂಕಿತರು ಅವರನ್ನು ಹಿಂಬಾಲಿಸಿ ಹತ್ಯೆ ನಡೆಸಿದ್ದಾರೆ.
ಹಂತಕರು ಯಾರಿಗೂ ಗೊತ್ತಾಗಬಾರದೆಂಬ ಕಾರಣಕ್ಕೆ ತಮ್ಮ ಕೈಯಲ್ಲಿದ್ದ ಶಸ್ತ್ರಾಸ್ತ್ರಗಳನ್ನು ಮರೆಮಾಚಿದ್ದು, ತಲೆಗೆ ಹೆಲ್ಮೆಟ್‌ಗಳನ್ನು ಹಾಕಿಕೊಂಡಿದ್ದರು.

ಉದ್ಯಮಿ ರಾಯ್ ಮನೆ ತಲುಪುತ್ತಿದಂತೆಯೇ ಶಂಕಿತರಲ್ಲಿ ಒಬ್ಬ ಅವರ ಬೆನ್ನಿಗೆ ಗುಂಡು (Shot in the back) ಹಾರಿಸಿದ್ದಾನೆ. ಅವರು ಕೆಳಗೆ ಬೀಳುತ್ತಿದ್ದಂತೆ ಹಲವು ಗುಂಡುಗಳನ್ನು ಹಾರಿಸಿ ಎಲ್ಲರೂ ಪರಾರಿಯಾಗಿದ್ದಾರೆ.

ಇದನ್ನು ಓದಿ : ಫಂಗಲ್ ಚಂಡಮಾರುತ ; ಕರ್ನಾಟಕ ಸೇರಿ ದೇಶದ ಏಳು ರಾಜ್ಯಗಳಿಗೆ Red alert.!

ಹಂತಕರು ಹಾರಿಸಿದ ಗುಂಡಿನ ಶಬ್ದ ಕೇಳಿ ಅಕ್ಕಪಕ್ಕದ ಮನೆಯವರು ಗಾಬರಿಯಾಗಿ (startled)ಹೊರ ಬಂದಿದ್ದಾರೆ. ಗುಂಡಿನ ದಾಳಿಯಿಂದ ಗಾಯಗೊಂಡ ಪರಾಸ್‌ ರಾಯ್ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಜ್ಞರು ಬಂದು ಮಾದರಿಗಳನ್ನು ಸಂಗ್ರಹಿಸುತ್ತಿದ್ದು, ಆಸ್ತಿ ವಿಚಾರಕ್ಕೆ ಹತ್ಯೆ ನಡೆದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ.

Astrology : ಡಿಸೆಂಬರ್ 01ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜೋತಿಷ್ಯ : 2024 ಡಿಸೆಂಬರ್ 01ರ ಭಾನುವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ಸಂಬಂಧಿಕರೊಂದಿಗೆ ವಿನಾಕಾರಣ ವಿವಾದಗಳು ಉದ್ಭವಿಸುತ್ತವೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ವ್ಯಾಪಾರದಲ್ಲಿ ಹೂಡಿಕೆ ವಿಷಯದಲ್ಲಿ ವಿಳಂಬ ಉಂಟಾಗುತ್ತದೆ. ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ.

*ವೃಷಭ ರಾಶಿ*
ದೀರ್ಘಾವಧಿ ಸಾಲದಿಂದ ಒತ್ತಡ ಹೆಚ್ಚಾಗುತ್ತದೆ ಮತ್ತು ಆದಾಯ ಸಾಕಾಗುವಷ್ಟು ದೊರೆಯುವುದಿಲ್ಲ. ಸಣ್ಣ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗಿಗಳಿಗೆ ಹಠಾತ್ ಬದಲಾವಣೆಗಳು ಉಂಟಾಗುತ್ತದೆ. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ.

ಇದನ್ನು ಓದಿ : ಫಂಗಲ್ ಚಂಡಮಾರುತ ; ಕರ್ನಾಟಕ ಸೇರಿ ದೇಶದ ಏಳು ರಾಜ್ಯಗಳಿಗೆ Red alert.!

*ಮಿಥುನ ರಾಶಿ*
ಹೊಸ ಕಾರ್ಯಕ್ರಮಗಳು ಪ್ರಾರಂಭವಾಗುತ್ತವೆ. ಪ್ರತಿಯೊಬ್ಬರಲ್ಲೂ ಗೌರವ ಮತ್ತು ಘನತೆ ಹೆಚ್ಚಾಗುತ್ತದೆ ಮತ್ತು ಅಮೂಲ್ಯವಾದ ವಸ್ತುಗಳು ಸಂಗ್ರಹಿಸುತ್ತೀರಿ. ಬಾಲ್ಯದ ಸ್ನೇಹಿತರಿಂದ ಶುಭ ಸುದ್ದಿ ದೊರೆಯುತ್ತದೆ. ಮನೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ.

*ಕಟಕ ರಾಶಿ*
ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತದೆ. ಹಠಾತ್ ಪ್ರಯಾಣ ಸೂಚನೆಗಳಿವೆ. ಮನೆಯ ಹೊರಗೆ ವಿನಾಕಾರಣ ವಿವಾದಗಳು ಉದ್ಭವಿಸುತ್ತವೆ. ದೇವಾಲಯ ದರ್ಶನದಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ವ್ಯಾಪಾರಗಳು ನಿಧಾನವಾಗುತ್ತವೆ. ಉದ್ಯೋಗಿಗಳಿಗೆ ಸ್ಥಾನಿಕ ಚಲನೆಯ ಸೂಚನೆಗಳಿವೆ.

*ಸಿಂಹ ರಾಶಿ*
ಸಮಾಜದಲ್ಲಿ ಪ್ರಮುಖರ ಪರಿಚಯ ಉಂಟಾಗುತ್ತದೆ. ದೂರದ ಊರಿನಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಹಣದ ವಿಚಾರದಲ್ಲಿ ಇದ್ದ ತೊಂದರೆಗಳು ನಿವಾರಣೆಯಾಗುತ್ತವೆ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಫಲ ನೀಡುತ್ತವೆ. ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಶುಭ ಸುದ್ದಿ ಸಿಗುತ್ತದೆ.

*ಕನ್ಯಾ ರಾಶಿ*
ವ್ಯರ್ಥ ಪ್ರಯಾಣ ಮಾಡಬೇಕಾಗುತ್ತದೆ. ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗ್ರತೆ ವಹಿಸಬೇಕು. ಭೂ ವಿವಾದಗಳು ಭಾವನಾತ್ಮಕವಾಗಿ ನೋವುಂಟು ಮಾಡುತ್ತವೆ. ಆದಾಯದ ಮಾರ್ಗಗಳು ಕಡಿಮೆಯಾಗುತ್ತವೆ. ವ್ಯಾಪಾರದಲ್ಲಿ ಅಲ್ಪ ಲಾಭ ದೊರೆಯುತ್ತದೆ. ನಿರುದ್ಯೋಗ ಪ್ರಯತ್ನಗಳು ವಿಫಲವಾಗುತ್ತವೆ.

ಇದನ್ನು ಓದಿ : Cuber crime : ಹೆಚ್ಚುತ್ತಿರುವ ನಕಲಿ ಟ್ರೇಡಿಂಗ್ ಅಪ್ಲಿಕೇಶನ್‌ಗಳ ವಂಚನೆ ಪ್ರಕರಣಗಳು.!

*ತುಲಾ ರಾಶಿ*
ಹೊಸ ಕೆಲಸಗಳನ್ನು ಕೈಗೆತ್ತಿಕೊಂಡು ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ. ಹಳೆಯ ಸ್ನೇಹಿತರನ್ನು ಭೇಟಿ ಮಾಡುತ್ತೀರಿ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಉದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳೊಂದಿಗೆ ಸೌಹಾರ್ದತೆಯಿಂದ ವರ್ತಿಸುತ್ತೀರಿ. ಆರ್ಥಿಕ ಪ್ರಗತಿ ಉಂಟಾಗುತ್ತದೆ.

*ವೃಶ್ಚಿಕ ರಾಶಿ*
ಶತ್ರುಗಳು ಕೂಡ ಸ್ನೇಹಿತರಾಗಿ, ಪರಸ್ಪರ ಸಹಾಯ ಮಾಡುತ್ತಾರೆ. ಸ್ಥಿರಾಸ್ತಿ ಖರೀದಿ ಪ್ರಯತ್ನಗಳು ಕೂಡಿ ಬರುತ್ತವೆ. ಕುಟುಂಬ ಸದಸ್ಯರಿಂದ ಶುಭ ಸುದ್ದಿ ದೊರೆಯುತ್ತದೆ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗದಲ್ಲಿ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯುತ್ತದೆ.

*ಧನುಸ್ಸು ರಾಶಿ*
ಕೌಟುಂಬಿಕ ಸಮಸ್ಯೆಗಳು ಕಿರಿಕಿರಿಯನ್ನು ಉಂಟುಮಾಡುತ್ತವೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಸ್ನೇಹಿತರೊಂದಿಗೆ ಕೆಲವು ವ್ಯವಹಾರಗಳಲ್ಲಿ ಭಿನ್ನಾಭಿಪ್ರಾಯಗಳಿರುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ದೈವಿಕ್ಕ ದರ್ಶನಗಳನ್ನು ಪಡೆಯುತ್ತೀರಿ. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಸಂಕಷ್ಟ ಎದುರಾಗುತ್ತದೆ. ಉದ್ಯೋಗಗಳು ಸ್ಥಾನ ಚಲನೆ ಸೂಚನೆಗಳಿವೆ.

*ಮಕರ ರಾಶಿ*
ಪ್ರಮುಖ ಕೆಲಸಗಳಲ್ಲಿ ಅಡಚಣೆಗಳು ಉಂಟಾಗುತ್ತದೆ. ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಸಹೋದರರೊಂದಿಗೆ ವಿವಾದಗಳಿರುತ್ತವೆ. ಹಠಾತ್ ಪ್ರಯಾಣದ ಸೂಚನೆಗಳಿವೆ. ವ್ಯಾಪಾರ ಪಾಲುದಾರರೊಂದಿಗೆ ಜಾಗರೂಕರಾಗಿರಿ. ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ, ಸಾಕಷ್ಟು ವಿಶ್ರಾಂತಿ ಇರುವುದಿಲ್ಲ.

ಇದನ್ನು ಓದಿ : Astrology : ನವೆಂಬರ್ 30ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

*ಕುಂಭ ರಾಶಿ*
ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ. ಬಾಲ್ಯದ ಗೆಳೆಯರ ಭೇಟಿ ಸಂತಸ ತರುತ್ತದೆ. ಬೆಲೆಬಾಳುವ ವಸ್ತ್ರ, ಆಭರಣ ಖರೀದಿಸಲಾಗುತ್ತದೆ. ವ್ಯಾಪಾರ ವಹಿವಾಟುಗಳು ಹೆಚ್ಚು ಉತ್ಸಾಹದಯಕವಾಗಿರುತ್ತವೆ. ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ ಸಿಗುತ್ತದೆ.

*ಮೀನ ರಾಶಿ*
ನಿರುದ್ಯೋಗ ಪ್ರಯತ್ನಗಳಲ್ಲಿ ಯಶಸ್ಸು ಸಾಧಿಸುತ್ತೀರಿ ಮತ್ತು ಬೆಲೆಬಾಳುವ ವಸ್ತು ಲಾಭಗಳನ್ನು ಪಡೆಯುತ್ತೀರಿ. ಸಮಾಜದ ಪ್ರಮುಖ ವ್ಯಕ್ತಿಗಳ ಬೆಂಬಲ ಹೆಚ್ಚಾಗುತ್ತದೆ. ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳೊಂದಿಗೆ ಮುಂದುವರಿಯುತ್ತೀರಿ. ಉದ್ಯೋಗದಲ್ಲಿ ನಿರೀಕ್ಷಿತ ಬಡ್ತಿ ದೊರೆಯುತ್ತದೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

error: Content is protected !!