Google search engine
Home Blog Page 4

Video : ಹಳಿಗಳ ಮೇಲೆಯೇ ಕಸ ಚೆಲ್ಲಿದ ರೈಲು ಸಿಬ್ಬಂದಿ ; ನೆಟ್ಟಿಗರಿಂದ ಕ್ಲಾಸ್.!

ಡೆಸ್ಕ್ : ರೈಲು ಸಿಬ್ಬಂದಿ ಓರ್ವರು ಚಲಿಸುತ್ತಿರುವ ರೈಲಿನಿಂದ ಹಳಿಗಳ ಮೇಲೆಯೇ ಕಸ ಎಸೆಯುತ್ತಿರುವ ವಿಡಿಯೋ ಸದ್ಯ ಸೋಶಿಯಲ್ ಮಿಡಿಯಾ (Social media) ದಲ್ಲಿ ಹರಿದಾಡುತ್ತಿದೆ. ಉದ್ಯೋಗಿಯ ಈ ಕೃತ್ಯಕ್ಕೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಕೃತ್ಯ ಮುಂಬೈನ ಸುಬೇದರ್‌ಗಂಜ್ (SFG) ಮತ್ತು ಲೋಕಮಾನ್ಯ ತಿಲಕ್ ಟರ್ಮಿನಸ್ (LTT) ನಡುವೆ ಕಾರ್ಯನಿರ್ವಹಿಸುವ ಬ್ರಾಡ್ ಗೇಜ್ ರೈಲು ಸುಬೇದರ್‌ಗಂಜ್-ಲೋಕಮಾನ್ಯ ತಿಲಕ್ ರೈಲಿನಲ್ಲಿ ಈ ಘಟನೆ ನಡೆದಿರುವುದಾಗಿ ಹೇಳಲಾಗಿದೆ.‌

ಇದನ್ನು ಓದಿ : ಕಡಿಮೆ ಬೆಲೆಯಲ್ಲಿ ವಿವಿಧ ಪ್ಲಾನ್ ಪರಿಚಯಿಸಿದ BSNL ; ಡಾಟಾ ಎಷ್ಟಿರುತ್ತೇ.?

ವಿಡಿಯೋದಲ್ಲಿ ಏನಿದೆ :

ಓರ್ವ ರೈಲು ಉದ್ಯೋಗಿ ರೈಲಿನ ಬಾಗಿಲು ಹತ್ತಿರ ಇರುವ ಸಿಂಕ್ ಹತ್ತಿರ ಕಸದ ಡಬ್ಬಿಗಳನ್ನು ಇಟ್ಟಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆ ವ್ಯಕ್ತಿ ರೈಲು ಚಲಿಸುತ್ತಿರುವಾಗಲ್ಲೇ ಆ ಕಸದ ಡಬ್ಬಿಯಲ್ಲಿ ತುಂಬಿದ ಕಸವನ್ನು ತೆಗೆದು ಹಳಿ ಮೇಲೆ ಎಸೆಯುತ್ತಿರುವುದು ವಿಡಿಯೋದಲ್ಲಿ ಕಾಣುತ್ತದೆ.

ಹೀಗೆ ರೈಲು ಉದ್ಯೋಗಿ ಕಸ ಎಸೆಯುತ್ತಿರುವುದನ್ನು ಇದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿದ್ದಾರೆ.

ಇದನ್ನು ಓದಿ : Astrology : ಮಾರ್ಚ್ 07ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಹೀಗೆ ರೆಕಾರ್ಡ್ ಮಾಡುತ್ತ ಕಸ ಯಾಕೆ ಹಳಿ ಮೇಲೆ ಎಸೆಯುತ್ತಿದ್ದಿರಾ? ಎಂದು ರೈಲ್ವೆ ಸಿಬ್ಬಂದಿಯನ್ನು ಪ್ರಶ್ನೆ ಮಾಡುತ್ತಾರೆ. ಆಗ ರೈಲ್ವೆ ಸಿಬ್ಬಂದಿ ಹಳಿ ಮೇಲೆ ಬಿಸಾಡದೆ ಮತ್ತೇನು ಮಾಡಬೇಕು ಎಂಬ ಉತ್ತರ ನೀಡುತ್ತಾನೆ. ಹಾಗೆ ಬಿಟ್ಟರೆ ಕಸದ ಡಬ್ಬಿಯಲ್ಲಿದ್ದ ಕಸವನ್ನು ಎಲ್ಲಿ ಚಲ್ಲುವುದು ಎಂದು ಮರು ಪ್ರಶ್ನೆ ಮಾಡುತ್ತಾನೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದಂತೆಯೇ ರೈಲ್ವೆ ಸಿಬ್ಬಂದಿಯ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಹೀಗೆ ರೈಲು ಹಳಿಗಳ ಮೇಲೆ ಕಸ ಎಸೆಯುವುದಾದರೆ ಕಸದ ಬುಟ್ಟಿಗಳನ್ನು ರೈಲುಗಳಲ್ಲಿ ಇಡುವುದಾದರೂ ಏಕೆ.?

ಇದನ್ನು ಓದಿ : ಲೋಕಾಯುಕ್ತ Raid ; ಕಂತೆ ಕಂತೆ ಹಣ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ , ಕೆಜಿಗಟ್ಟಲೆ ಬೆಳ್ಳಿ ವಶ.!

ರೈಲಿನಲ್ಲಿ ಕೆಲಸ ಮಾಡಲು ಇಂತಹ ಕೆಲ ಸಿಬ್ಬಂದಿಗಳು ಇದ್ದರೆ ಸಾಕು ದೇಶ ಅಭಿವೃದ್ಧಿ ಹೊಂದುವುದಂತು ಗ್ಯಾರಂಟಿ ಅಂತ ನೆಟ್ಟಿಗರು ಅಪಹಾಸ್ಯ ಮಾಡುತ್ತಿದ್ದಾರೆ.

ಇಲ್ಲಿದೆ ನೋಡಿ ವಿಡಿಯೋ :

Astrology : ಮಾರ್ಚ್ 07ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜೋತಿಷ್ಯ : 2025 ಮಾರ್ಚ್ 07ರ ಶುಕ್ರವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ
ನೋಡಿ.

*ಮೇಷ ರಾಶಿ*
ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ವೃತ್ತಿ ಉದ್ಯೋಗಗಳಲ್ಲಿ ಉತ್ಸಾಹದಾಯಕ ವಾತಾವರಣ ಇರುತ್ತದೆ. ಕೆಲವು ಕಾರ್ಯಗಳಲ್ಲಿ ಬಂಧು ಮಿತ್ರರ ಸಹಾಯ ದೊರೆಯುತ್ತದೆ. ವೃತ್ತಿ ವ್ಯವಹಾರದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ.

*ವೃಷಭ ರಾಶಿ*
ಆರ್ಥಿಕ ಅನುಕೂಲತೆ ಉಂಟಾಗುತ್ತದೆ. ಉದ್ಯೋಗದಲ್ಲಿ ನಿರೀಕ್ಷೆಗಳು ಈಡೇರುತ್ತವೆ. ಹೊಸ ವ್ಯವಹಾರಗಳನ್ನು ಪ್ರಾರಂಭಿಸಿ ಲಾಭವನ್ನು ಪಡೆಯುತ್ತೀರಿ. ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ. ಆಪ್ತ ಸ್ನೇಹಿತರಿಂದ ಅನಿರೀಕ್ಷಿತ ಶುಭ ಕಾರ್ಯಕ್ಕೆ ಆಹ್ವಾನಗಳು ದೊರೆಯುತ್ತದೆ. ಪ್ರಮುಖ ವಿಷಯಗಳಲ್ಲಿ ಸ್ವಂತ ಆಲೋಚನೆಗಳು ಕೂಡಿ ಬರುತ್ತವೆ.

*ಮಿಥುನ ರಾಶಿ*
ವ್ಯಾಪಾರದಲ್ಲಿ ಅಲ್ಪ ಲಾಭ ದೊರೆಯುತ್ತದೆ. ಸಾಲಗಾರರ ಒತ್ತಡ ಹೆಚ್ಚಾಗುತ್ತದೆ. ಪ್ರಮುಖ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಕೋಪವನ್ನು ಎದುರಿಸಬೇಕಾಗುತ್ತದೆ. ಮಕ್ಕಳ ಅನಾರೋಗ್ಯದ ವಿಷಯದಲ್ಲಿ ಸಮಸ್ಯೆಗಳಿರುತ್ತವೆ. ಇತರರ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಬದಲಾಯಿಸುವುದು ಒಳ್ಳೆಯದು. ಆಧ್ಯಾತ್ಮಿಕ ವಿಷಯಗಳತ್ತ ಗಮನ ಹರಿಸುತ್ತೀರಿ.

*ಕಟಕ ರಾಶಿ*
ಬಾಲ್ಯದ ಗೆಳೆಯರ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿರುತ್ತದೆ. ಪ್ರಮುಖ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ವೃತ್ತಿ ಮತ್ತು ವ್ಯಾಪಾರ ಸುಗಮವಾಗಿ ಸಾಗುತ್ತದೆ. ನಿರುದ್ಯೋಗಿಗಳಿಗೆ ಅನುಕೂಲಕರ ವಾತಾವರಣವಿರುತ್ತದೆ. ಸಮಾಜದ ಪ್ರಮುಖರ ಸಹಾಯ, ಸಹಕಾರ ದೊರೆಯುತ್ತದೆ.

*ಸಿಂಹ ರಾಶಿ*
ಸಹೋದರರೊಂದಿಗೆ ಆಸ್ತಿ ವಿವಾದಗಳನ್ನು ಪರಿಹರಿಸಲಾಗುತ್ತದೆ. ಹೊಸ ವಾಹನ ಖರೀದಿಸಲಾಗುತ್ತದೆ. ಹಣಕಾಸಿನ ವ್ಯವಹಾರಗಳು ಲಾಭದಾಯಕವಾಗಿರುತ್ತದೆ. ವೃತ್ತಿಪರ ವ್ಯವಹಾರಗಳು ಎಂದಿಗಿಂತಲೂ ಉತ್ತಮವಾಗಿರುತ್ತವೆ. ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು ನಿವಾರಣೆಯಾಗುತ್ತವೆ. ಸಹೋದರರೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ.

*ಕನ್ಯಾ ರಾಶಿ*
ಖರ್ಚಿಗೆ ತಕ್ಕಷ್ಟು ಆದಾಯ ಬರುವುದಿಲ್ಲ. ದೀರ್ಘಾವಧಿಯ ಸಾಲಗಳನ್ನು ತೀರಿಸಲು ಹೊಸ ಸಾಲದ ಪ್ರಯತ್ನಗಳನ್ನು ಮಾಡಲಾಗುತ್ತದೆ. ವಿವಾದಗಳಿಂದ ದೂರವಿರುವುದು ಉತ್ತಮ. ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ ಮತ್ತು ಕೌಟುಂಬಿಕ ವಿಷಯಗಳಲ್ಲಿ ಹಠಾತ್ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ.

*ತುಲಾ ರಾಶಿ*
ಹಣಕಾಸಿನ ವ್ಯವಹಾರಗಳು ಉತ್ಸಾಹದಾಯಕವಾಗಿರುತ್ತದೆ. ಕೆಲವು ವಿಷಯಗಳಲ್ಲಿ ಕುಟುಂಬ ಸದಸ್ಯರ ಸಲಹೆ ಕೂಡಿ ಬರುತ್ತದೆ. ಮನೆಯ ಹೊರಗೆ ನಿಮ್ಮ ಮಾತಿಗೆ ಮೌಲ್ಯವು ಹೆಚ್ಚಾಗುತ್ತದೆ. ಉದ್ಯೋಗದಲ್ಲಿನ ವಿವಾದಗಳು ಇತ್ಯರ್ಥವಾಗುತ್ತವೆ. ಸ್ಥಿರಾಸ್ತಿ ಮಾರಾಟದಿಂದ ಲಾಭ ದೊರೆಯುತ್ತದೆ. ದೈವಿಕ ಸೇವಾ ಚಟುವಟಿಕೆಗಳಿಗೆ ನೆರವು ನೀಡಲಾಗುತ್ತದೆ.

*ವೃಶ್ಚಿಕ ರಾಶಿ*
ಕುಟುಂಬ ಸದಸ್ಯರೊಂದಿಗೆ ವಾದ-ವಿವಾದಗಳಿರುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಖರ್ಚು ಮತ್ತು ಶ್ರಮದಿಂದಲೂ ಪೂರ್ಣಗೊಳ್ಳುವುದಿಲ್ಲ. ನಿರುದ್ಯೋಗ ಪ್ರಯತ್ನಗಳು ನಿಧಾನವಾಗುತ್ತವೆ. ಉದ್ಯೋಗದಲ್ಲಿ ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ, ಉದ್ಯೋಗದಲ್ಲಿ ಶ್ರಮಕ್ಕೆ ತಕ್ಕ ಯಾವುದೇ ಫಲಿತಾಂಶ ಕಂಡುಬರುವುದಿಲ್ಲ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಸ್ವಲ್ಪ ನೋವನ್ನು ಉಂಟುಮಾಡುತ್ತವೆ. ಅಗತ್ಯಕ್ಕೆ ಹಣ ಕೈಯಲ್ಲಿ ಇಟ್ಟುಕೊಳ್ಳುವುದಿಲ್ಲ.

*ಧನುಸ್ಸು ರಾಶಿ*
ಸ್ಥಿರಾಸ್ತಿ ಖರೀದಿ ಪ್ರಯತ್ನಗಳಿಗೆ ಇದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಅಧಿಕಾರಿಗಳ ಬೆಂಬಲ ಹೆಚ್ಚಾಗುತ್ತದೆ. ಹಣಕಾಸಿನ ವಿಷಯದಲ್ಲಿ ಹೆಚ್ಚಿನ ಪ್ರಗತಿ ಕಂಡುಬರುತ್ತದೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ.

*ಮಕರ ರಾಶಿ*
ಉದ್ಯೋಗಗಳಲ್ಲಿ ಕಾರ್ಯನಿರ್ವಹಣೆಗೆ ತಕ್ಕ ಮೆಚ್ಚುಗೆ ದೊರೆಯುತ್ತದೆ. ಮನೆಯ ಹೊರಗೆ ನಿಮ್ಮ ಮಾತಿಗೆ ಮೌಲ್ಯ ಹೆಚ್ಚಾಗುತ್ತದೆ. ಹಠಾತ್ ಧನಲಾಭ ದೊರೆಯುತ್ತದೆ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ಬಾಲ್ಯದ ಗೆಳೆಯರೊಂದಿಗೆ ಭೋಜನ ಮನರಂಜನೆಯಲ್ಲಿ ಭಾಗವಹಿಸುತ್ತೀರಿ. ಹೊಸ ವ್ಯಾಪಾರಕ್ಕಾಗಿ ಹೂಡಿಕೆಗಳನ್ನು ಸ್ವೀಕರಿಸಲಾಗುತ್ತದೆ.

*ಕುಂಭ ರಾಶಿ*
ಪ್ರಯಾಣದಲ್ಲಿ ವಾಹನ ಅಪಘಾತದ ಸೂಚನೆಗಳಿವೆ, ನಿಮ್ಮ ನಡವಳಿಕೆಯಿಂದ ಇತರರಿಗೆ ತೊಂದರೆ ಉಂಟಾಗುತ್ತದೆ. ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ಉದ್ಯೋಗಗಳು ನಿರುತ್ಸಾಹಗೊಳಿಸುತ್ತವೆ. ನಿರುದ್ಯೋಗ ಪ್ರಯತ್ನಗಳು ಕೂಡಿ ಬರುವುದಿಲ್ಲ. ವಿವಾದಗಳಿಂದ ದೂರವಿರುವುದು ಉತ್ತಮ.

*ಮೀನ ರಾಶಿ*
ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಇತರರಿಗೆ ಹಣ ನೀಡುವಾಗ ಎಚ್ಚರದಿಂದಿರಿ. ಕೈಗೆತ್ತಿಕೊಂಡ ಕೆಲಸದಲ್ಲಿ ಶ್ರಮ ಹೆಚ್ಚಾಗುತ್ತದೆ. ಬಂಧು ಮಿತ್ರರೊಂದಿಗೆ ವಿವಾದ ಉಂಟಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಸಮಸ್ಯೆಗಳಿರುತ್ತವೆ. ಹಣಕಾಸಿನ ತೊಂದರೆಗಳು ಕಿರಿಕಿರಿಯುಂಟುಮಾಡುತ್ತವೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ಲೋಕಾಯುಕ್ತ Raid ; ಕಂತೆ ಕಂತೆ ಹಣ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ , ಕೆಜಿಗಟ್ಟಲೆ ಬೆಳ್ಳಿ ವಶ.!

ಬೆಂಗಳೂರು : ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ನಿದ್ದೆಯಲ್ಲಿದ್ದ 8 ಚೀಫ್ ಇಂಜಿನಿಯರ್‌ (Chief Engineer) ಸೇರಿ ವಿವಿಧ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಚಳಿಬಿಡಿಸಿದ್ದಾರೆ. ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು (Lokayukta Police) ದಾಳಿ ಮಾಡಿದ್ದು, ಕಂತೆ ಕಂತೆ ಹಣ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕೆಜಿಗಟ್ಟಲೆ ಬೆಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ.

14 ಜನ ಅಧಿಕಾರಿಗಳು ಬಸವೇಶ್ವರ ನಗರದಲ್ಲಿರುವ DPAR Chief Engineer ನಂಜುಂಡಪ್ಪ ಅವರ ಮನೆಗೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಚೀಫ್ ಇಂಜಿನಿಯರ್ ನಂಜುಂಡಪ್ಪ ಅವರು ಅಧಿಕಾರಿಗಳು ದಾಳಿ ಮಾಡಿದ್ದಾಗ ಮನೆಯಲ್ಲಿಯೇ ಇದ್ದರು ಎಂದು ತಿಳಿದು ಬಂದಿದೆ.

ಇದನ್ನು ಓದಿ : ಕಡಿಮೆ ಬೆಲೆಯಲ್ಲಿ ವಿವಿಧ ಪ್ಲಾನ್ ಪರಿಚಯಿಸಿದ BSNL ; ಡಾಟಾ ಎಷ್ಟಿರುತ್ತೇ.?

ಡಿಪಿಎಆರ್ ಚೀಫ್ ಇಂಜಿನಿಯರ್ ಮನೆಯಲ್ಲಿ ಮದ್ಯದ ಬಾಟಲ್‌ಗಳು ಪತ್ತೆಯಾದ ಹಿನ್ನಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಅಬಕಾರಿ ಇಲಾಖೆ (Excise Department) ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಅಬಕಾರಿ ಅಧಿಕಾರಿಗಳು ಎರಡು ಜೀಪ್‌ಗಲ್ಲಿ ಮನೆಗೆ ಬಂದು ಪರಿಶೀಲನೆ ಮಾಡಿದ್ದರು. ಮಿತಿಗಿಂತ ಹೆಚ್ಚಾಗಿದ್ದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು ಲೋಕಾಯುಕ್ತ ದಾಳಿ ವೇಳೆ ಡಿಪಿಎಆರ್ ಚೀಫ್ ಇಂಜಿನಿಯರ್ ನಿವಾಸದಲ್ಲಿ ಸಾಕಷ್ಟು ಆಸ್ತಿ ಪತ್ತೆಯಾಗಿದೆ. ಬರೋಬ್ಬರಿ 51.38 ಲಕ್ಷ ರೂ. ಮೌಲ್ಯದ 841.49 ಗ್ರಾಂ ಚಿನ್ನ ಪತ್ತೆಯಾಗಿದೆ. 4.66 ಲಕ್ಷ ಮೌಲ್ಯದ 5 ಕೆಜಿ 936 ಗ್ರಾಂ ಬೆಳ್ಳಿ ಪತ್ತೆಯಾಗಿದೆ. 3,91,079 ರೂ. ನಗದು ಹಾಗೂ 60 ಸಾವಿರ ರೂ. ಮೌಲ್ಯದ ವಿದೇಶಿ ಕರೆನ್ಸಿ ಪತ್ತೆಯಾಗಿದೆ.

ಇದನ್ನು ಓದಿ : Astrology : ಮಾರ್ಚ್ 06ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಒಟ್ಟಾರೆಯಾಗಿ 60,56,557 ರೂ. ಮೌಲ್ಯದ ವಸ್ತುಗಳು ಹಾಗೂ ನಗದು ಪತ್ತೆಯಾಗಿದೆ. ಇದರ ಜೊತೆಗೆ, ಸ್ತಿರಾಸ್ತಿಯ ಭಾಗವಾಗಿ 39 ಲಕ್ಷ ರೂ. ಮೌಲ್ಯದ ನಾಲ್ಕು ಕಾರುಗಳು ಹಾಗೂ 5 ಕೋಟಿ ಮೌಲ್ಯದ 2 ಮನೆಗಳು ಪತ್ತೆಯಾಗಿವೆ.

ರಾಜ್ಯದಾದ್ಯಂತ 8 ಅಧಿಕಾರಿಗಳ ಮನೆಗಳ ಮೇಲೆ ನಡೆದ ಲೋಕಾಯುಕ್ತ ದಾಳಿಯ ವಿವರ :

  1. ಡಿಪಿಎಆರ್ (DPAR) ಚೀಫ್ ಇಂಜಿನಿಯರ್ ಟಿಡಿ ನಂಜುಂಡಪ್ಪ.
  2. ಕ್ವಾಲಿಟಿ ಕಂಟ್ರೋಲ್ ಹಾಗೂ Quality Assurance ನ ಬಿಬಿಎಂಪಿ ಎಕ್ಸೀಕ್ಯೂಟಿವ್ ಇಂಜಿನಿಯರ್ ಹೆಚ್.ಬಿ ಕಲ್ಲೇಶಪ್ಪ.
  3. ಕೋಲಾರ ಟೌನ್ ಬೆಸ್ಕಾಂ AEE ಜಿ. ನಾಗರಾಜ್.
  4. ಕಲಬುರುಗಿ ರಾಜ್ಯ ಹೆದ್ದಾರಿ ಅಭಿವೃದ್ಧಿ Unit ನ ಅಧಿಕಾರಿ ಜಗನ್ನಾಥ.
  5. ದಾವಣಗೆರೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗದ Distic Statical ಆಧಿಕಾರಿ ಜಿ.ಎಸ್. ನಾಗರಾಜು.
  6. ತುಮಕೂರು ತಾವರಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಚೀಫ್ ಮೆಡಿಕಲ್ ಆಫೀಸರ್ (CMO) ಡಾ.ಜಗದೀಶ್.
  7. ಬಾಗಲಕೋಟೆ ಜಿಲ್ಲೆ ಪಂಚಾಯತ್ ರಾಜ್ ಇಂಜಿನಿಯರಿಂಗ್ FDA ಮಲ್ಲಪ್ಪ ಸಾಬಣ್ಣ.
  8. ವಿಜಯಪುರ ಹೌಸಿಂಗ್ ಬೋರ್ಡ್ FDA ಶಿವಾನಂದ್ ಶಿವಶಂಕರ್ ಕಂಬಾವಿ.

ಇದನ್ನು ಓದಿ : ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದ ಸ್ಯಾಂಡಲ್ ವುಡ್ Actress.!

ಹೀಗೆ ಒಟ್ಟು 8 ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಎಲ್ಲ ವಸ್ತುಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಸದ್ಯ ಬೆಂಗಳೂರಿನ ಡಿಪಿಎಆರ್ (DPAR) ಚೀಫ್ ಇಂಜಿನಿಯರ್ ಮನೆಯಲ್ಲಿನ ವಸ್ತುಗಳ ಮಾಹಿತಿ ಮಾತ್ರ ಲಭ್ಯವಾಗಿದೆ.

Astrology : ಮಾರ್ಚ್ 06ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜೋತಿಷ್ಯ : 2025 ಮಾರ್ಚ್ 06ರ ಗುರವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ
ನೋಡಿ.

*ಮೇಷ ರಾಶಿ*
ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚಿನ ಪ್ರಗತಿ ಕಂಡುಬರುತ್ತದೆ. ಹೊಸ ವಿಷಯಗಳನ್ನು ತಿಳಿದುಕೊಳ್ಳುತ್ತೀರಿ. ಆರ್ಥಿಕ ವಾತಾವರಣ ಅನುಕೂಲಕರವಾಗಿರುತ್ತದೆ. ಮನೆಯ ಹೊರಗೆ ನಿಮ್ಮ ಪ್ರಯತ್ನಗಳಿಗೆ ಸೂಕ್ತ ಮನ್ನಣೆ ದೊರೆಯುತ್ತದೆ. ವ್ಯಾಪಾರಗಳು ನಿರೀಕ್ಷೆಯಂತೆ ಲಾಭವನ್ನು ಪಡೆಯುತ್ತವೆ.

*ವೃಷಭ ರಾಶಿ*
ಶುಭ ಕಾರ್ಯಗಳನ್ನು ನೆರವೇರಿಸುತ್ತೀರಿ. ಕೈಗೊಂಡ ಕಾರ್ಯಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಪ್ರೋತ್ಸಾಹಗಳು ದೊರೆಯುತ್ತವೆ. ಸ್ಥಿರಾಸ್ತಿ ವೃದ್ಧಿಯಾಗುತ್ತದೆ. ಪ್ರಮುಖ ವ್ಯಕ್ತಿಗಳಿಂದ ಅನಿರೀಕ್ಷಿತ ಆಹ್ವಾನಗಳು ದೊರೆಯುತ್ತವೆ.

*ಮಿಥುನ ರಾಶಿ*
ವೃತ್ತಿಪರ ವ್ಯವಹಾರಗಳು ಕಿರಿಕಿರಿ ಉಂಟುಮಾಡುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಮಸ್ಯೆಗಳಿರುತ್ತವೆ. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಬಂಧುಗಳೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ.

*ಕಟಕ ರಾಶಿ*
ಆರೋಗ್ಯದ ವಿಚಾರದಲ್ಲಿ ಜಾಗ್ರತೆ ವಹಿಸಬೇಕು. ಹಣಕಾಸಿನ ಪರಿಸ್ಥಿತಿ ಸ್ಥಿರವಾಗಿರುವುದಿಲ್ಲ. ವೃತ್ತಿಪರ ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗೆ ಸಮಸ್ಯೆಗಳಿರುತ್ತವೆ. ದೂರ ಪ್ರಯಾಣ ಮಾಡಬೇಕಾಗುತ್ತದೆ. ಹೊಸ ವ್ಯಾಪಾರ ಆರಂಭಿಸಲು ಅಡೆತಡೆಗಳು ಎದುರಾಗುತ್ತವೆ.

*ಸಿಂಹ ರಾಶಿ*
ವ್ಯಾಪಾರಗಳು ತೃಪ್ತಿಕರವಾಗಿರುತ್ತವೆ. ಮಕ್ಕಳಿಗೆ ಹೊಸ ಶೈಕ್ಷಣಿಕ ಅವಕಾಶಗಳು ಸಿಗುತ್ತವೆ. ಉದ್ಯೋಗಿಗಳಿಗೆ ಕೆಲಸದ ಒತ್ತಡ ನಿವಾರಣೆಯಾಗುತ್ತದೆ. ಬಾಲ್ಯದ ಸ್ನೇಹಿತರ ಸಹಾಯದಿಂದ ಕೆಲವು ಕಾರ್ಯಗಳು ಪೂರ್ಣಗೊಳ್ಳುತ್ತವೆ. ಭೋಜನಾ ಮನರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೀರಿ.

*ಕನ್ಯಾ ರಾಶಿ*
ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಕುಟುಂಬ ಸದಸ್ಯರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡುತ್ತೀರಿ. ಉದ್ಯೋಗದಲ್ಲಿ ಇತರರೊಂದಿಗೆ ಸಮಸ್ಯೆಗಳಿರುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಮಸ್ಯೆಗಳಿರುತ್ತವೆ. ವೃತ್ತಿಪರ ವ್ಯವಹಾರಗಳು ನಿಧಾನವಾಗುತ್ತವೆ.

*ತುಲಾ ರಾಶಿ*
ಉದ್ಯೋಗಿಗಳಿಗೆ ಹೆಚ್ಚಿನ ಅವಕಾಶಗಳು ಸಿಗುತ್ತವೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ. ಸ್ಥಿರಾಸ್ತಿ ಮಾರಾಟದಿಂದ ಲಾಭ ದೊರೆಯುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ಹಠಾತ್ ಯಶಸ್ಸು ದೊರೆಯುತ್ತದೆ. ಕೆಲವು ಕೆಲಸಗಳಲ್ಲಿ ಆತ್ಮೀಯರ ಸಲಹೆಯನ್ನು ತೆಗೆದುಕೊಳ್ಳುವುದು ಒಳ್ಳೆಯದು.

*ವೃಶ್ಚಿಕ ರಾಶಿ*
ಸಮಯಕ್ಕೆ ನಿದ್ದೆ ಆಹಾರ ಇರುವುದಿಲ್ಲ. ಆಧ್ಯಾತ್ಮಿಕ ವಿಷಯಗಳತ್ತ ಗಮನ ಹರಿಸುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿ ಆರ್ಥಿಕ ನಷ್ಟಗಳಿರುತ್ತವೆ ಮತ್ತು ಉದ್ಯೋಗಿಗಳು ತಮ್ಮ ಕೆಲಸಕ್ಕೆ ಸರಿಯಾದ ಮನ್ನಣೆಯನ್ನು ಪಡೆಯದೆ ಟೀಕೆಗಳನ್ನು ಎದುರಿಸಬೇಕಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳದೆ ಕಿರಿಕಿರಿ ಹೆಚ್ಚಾಗುತ್ತದೆ.

*ಧನುಸ್ಸು ರಾಶಿ*
ಸಂಬಂಧಿಕರು ಮತ್ತು ಸ್ನೇಹಿತರಿಂದ ಬೆಂಬಲವನ್ನು ಪಡೆಯುತ್ತೀರಿ. ಹೊಸ ವಾಹನ ಖರೀದಿಸಲಾಗುತ್ತದೆ. ವೃತ್ತಿಪರ ವ್ಯಾಪಾರದಲ್ಲಿ ಉತ್ಸಾಹದಿಂದ ಕೆಲಸ ಮಾಡಿ ಲಾಭ ಗಳಿಸುತ್ತೀರಿ. ಹಣಕಾಸಿನ ಏರಿಳಿತಗಳು ನಿವಾರಣೆಯಾಗಿ ಸ್ಥಿರತೆ ಉಂಟಾಗುತ್ತದೆ. ಮನೆಯಲ್ಲಿ ಮದುವೆ ಶುಭ ಕಾರ್ಯ ಪ್ರಯತ್ನಗಳು ನಡೆಯುತ್ತವೆ.

*ಮಕರ ರಾಶಿ*
ಪ್ರಯಾಣದ ಸಮಯದಲ್ಲಿ ಹೊಸ ಪರಿಚಯಗಳುಗಳು ಭವಿಷ್ಯದಲ್ಲಿ ಉಪಯುಕ್ತವಾಗುತ್ತವೆ. ಕೆಲಸಗಳು ಅನಿರೀಕ್ಷಿತವಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರ ಉದ್ಯೋಗಗಳಲ್ಲಿನ ಸಮಸ್ಯೆಗಳನ್ನು ನಿವಾರಿಸಿ ಧೈರ್ಯದಿಂದ ಮುನ್ನಡೆಯುತ್ತೀರಿ. ಸಹೋದರರೊಂದಿಗಿನ ಆಸ್ತಿ ವಿವಾದಗಳು ಬಗೆಹರಿಯುತ್ತವೆ.

*ಕುಂಭ ರಾಶಿ*
ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳದ ಕಾರಣ ಶ್ರಮ ಶೀಲತೆ ಹೆಚ್ಚಾಗುತ್ತದೆ. ಸಂಬಂಧಿಕರು ನಿಮ್ಮ ಒಪ್ಪುವುದಿಲ್ಲ ಆಲೋಚನೆಗಳಲ್ಲಿ ಸ್ಥಿರತೆ ಇರುವುದಿಲ್ಲ. ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳು ಹೆಚ್ಚಾಗುತ್ತವೆ. ವ್ಯಾಪಾರ ಪಾಲುದಾರರೊಂದಿಗೆ ಸಣ್ಣ ಸಮಸ್ಯೆಗಳಿರುತ್ತವೆ.

*ಮೀನ ರಾಶಿ*
ಹೊಸ ವ್ಯಾಪಾರಗಗಳಲ್ಲಿ ಅಡೆತಡೆಗಳಿರುತ್ತವೆ. ದೂರದ ಪ್ರಯಾಣದ ಸೂಚನೆಗಳಿವೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲವರ ವರ್ತನೆ ಕಿರಿಕಿರಿ ಉಂಟುಮಾಡುತ್ತದೆ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಕೈಗೆತ್ತಿಕೊಂಡ ಕೆಲಸ ನಿಧಾನವಾಗಿ ಸಾಗುತ್ತದೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ಕಡಿಮೆ ಬೆಲೆಯಲ್ಲಿ ವಿವಿಧ ಪ್ಲಾನ್ ಪರಿಚಯಿಸಿದ BSNL ; ಡಾಟಾ ಎಷ್ಟಿರುತ್ತೇ.?

ನವದೆಹಲಿ : ಬಿಎಸ್ಎನ್ಎಲ್ (BSNL) ತನ್ನ ಜಾಲವನ್ನು ವೇಗವಾಗಿ ವಿಸ್ತರಿಸಲು ಸಿದ್ಧತೆ ನಡೆಸುತ್ತಿದ್ದು, ದೇಶಾದ್ಯಂತ 4G ಜಾಲವನ್ನು ವಿಸ್ತರಿಸಲಾಗುತ್ತಿದೆ. ಈ ವರ್ಷದ ಮೊದಲಾರ್ಧದಲ್ಲಿ ಒಂದು ಲಕ್ಷ ಟವರ್‌ಗಳನ್ನು ಸ್ಥಾಪಿಸುವ ಮೂಲಕ BSNL ಕೂಡ 5G ನೆಟ್‌ವರ್ಕ್ ಸೇವೆಗಳನ್ನು ಲಭ್ಯವಾಗುವಂತೆ ಮಾಡಲು ಸಿದ್ಧತೆ ನಡೆಸುತ್ತಿದೆ.

ಕಳೆದ ತಿಂಗಳಲ್ಲಿ, ಅದು 65,000 4G ಟವರ್‌ಗಳು ಗ್ರಾಹಕರಿಗೆ ಲಭ್ಯವಾಗುವಂತೆ ಮಾಡಿದೆ. ತನ್ನ ಜಾಲವನ್ನು ವಿಸ್ತರಿಸುವುದರ ಜೊತೆಗೆ, ಆಕರ್ಷಕ ರೀಚಾರ್ಜ್ ಯೋಜನೆಗಳೊಂದಿಗೆ ಬಳಕೆದಾರರನ್ನು ಆಕರ್ಷಿಸುತ್ತಿದೆ.

ಇದನ್ನು ಓದಿ : Chicken ಸೇವನೆಗೆ ಪಶುಸಂಗೋಪನೆ ಇಲಾಖೆಯಿಂದ ಗೈಡ್‌ಲೈನ್ಸ್‌.!

BSNL ಹೆಚ್ಚಿನ Validity ಬಯಸುವ ಬಳಕೆದಾರರಿಗಾಗಿ ಯೋಜನೆಗಳನ್ನು ಪರಿಚಯಿಸುತ್ತಿದೆ. ಇದರ ಭಾಗವಾಗಿ, ಇತ್ತೀಚೆಗೆ 6 ತಿಂಗಳ ಮಾನ್ಯತೆಯ ಹೊಸ ಯೋಜನೆಯನ್ನು ಪರಿಚಯಿಸಿದೆ. BSNL ಈ ಹೊಸ ರೀಚಾರ್ಜ್ (Recharge) ಯೋಜನೆಯನ್ನು 897 ರೂ.ಗಳಿಗೆ ಪರಿಚಯಿಸಿದೆ. ಈ ಯೋಜನೆಯೊಂದಿಗೆ ರೀಚಾರ್ಜ್ ಮಾಡುವಾಗ ಬಳಕೆದಾರರು 6 ತಿಂಗಳ ಮಾನ್ಯತೆಯನ್ನು ಪಡೆಯುತ್ತಾರೆ. 

ಒಮ್ಮೆ Recharge ಮಾಡಿದರೆ, ಆರು ತಿಂಗಳವರೆಗೆ ಮತ್ತೆ ರೀಚಾರ್ಜ್ ಮಾಡುವ ಅಗತ್ಯವಿಲ್ಲ. ಪ್ರಯೋಜನಗಳ ಬಗ್ಗೆ ಹೇಳುವುದಾದರೆ, ನೀವು ಈ ಯೋಜನೆಯೊಂದಿಗೆ ರೀಚಾರ್ಜ್ ಮಾಡಿದರೆ, ನೀವು 180 ದಿನಗಳವರೆಗೆ ಅನಿಯಮಿತ ಕರೆಗಳು (Unlimited call) ಮತ್ತು ದಿನಕ್ಕೆ 100 ಉಚಿತ SMS ಗಳನ್ನು ಪಡೆಯಬಹುದು. ಅದೇ ರೀತಿ, ಡೇಟಾದ ವಿಷಯದಲ್ಲಿ, ಒಟ್ಟು 90 GB ಡೇಟಾ ಲಭ್ಯವಿದೆ. ಈ ಡೇಟಾವನ್ನು ಯಾವುದೇ ದೈನಂದಿನ ಮಿತಿಯಿಲ್ಲದೆ ಬಳಸಬಹುದು. ಅದಾದ ನಂತರ, ಇಂಟರ್ನೆಟ್ ವೇಗ 40kbps ಗೆ ಕಡಿಮೆಯಾಗುತ್ತದೆ. 

ಇದನ್ನು ಓದಿ : ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದ ಸ್ಯಾಂಡಲ್ ವುಡ್ Actress.!

BSNL ರೂ.397ಕ್ಕೆ 150 ದಿನದ ವ್ಯಾಲಿಡಿಟಿ ಪ್ಲಾನ್/150-day validity plan for Rs.397 : 

ಬಿಎಸ್‌ಎನ್ಎಲ್‌ ಪ್ರಿಪೇಯ್ಡ್ (BSNL Prepaid) ಗ್ರಾಹಕರು 397 ರೂಪಾಯಿ Recharge ಮಾಡಿಕೊಂಡರೆ 150 ದಿನದ Validity ಸಿಗುತ್ತದೆ. Recharge Pack Active ಆದ ಮೊದಲ 30 ದಿನ ಗ್ರಾಹಕರಿಗೆ ಪ್ರತಿದಿನ 2GB ಡೇಟಾ, ಉಚಿತವಾಗಿ ದಿನಕ್ಕೆ 100 SMS ಕಳುಹಿಸಬಹುದು. ಉಚಿತವಾಗಿ ಯಾವುದೇ Network ಗೆ ಅನಿಯಮಿತವಾಗಿ (Unlimited call) ಕರೆ ಮಾಡಬಹುದು. 

BSNL ಒಂದು ವರ್ಷ ವ್ಯಾಲಿಡಿಟಿಯ ಪ್ಲಾನ್/One year validity plan : 

BSNL Prepaid ಗ್ರಾಹಕರು 1,999 ರೂಪಾಯಿ Recharge ಮಾಡಿಕೊಂಡರೆ ಒಂದು ವರ್ಷ ರೀಚಾರ್ಜ್ (One year) ಮಾಡಿಕೊಳ್ಳುವ ಅವಶ್ಯಕತೆ ಇರಲ್ಲ. ಈ Special pack ನಲ್ಲಿ ಗ್ರಾಹಕರಿಗೆ ಒಟ್ಟು 600GB DATA ಸಿಗುತ್ತದೆ. ಪ್ರತಿದಿನ ಉಚಿತವಾಗಿ 100 SMS ಕಳುಹಿಸಬಹುದು. ಹಾಗೆ ಯಾವುದೇ Network ಗೆ ಅನಿಯಮಿತವಾಗಿ ಕರೆ (Unlimited call) ಮಾಡಬಹುದು. DATA Pack ಮುಕ್ತಾಯವಾಗುತ್ತಿದ್ದಂತೆ Net Speed 40 kbps ಆಗುತ್ತದೆ.

ಇದನ್ನು ಓದಿ : Belagavi : ಪ್ರೇಯಸಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ.!

BSNL ರೂ. 347 ಪ್ರಿಪೇಯ್ಡ್ ಪ್ಲಾನ್/BSNL Rs 347 Prepaid Plan : 

347 ರೂಪಾಯಿ ಪ್ಲಾನ್‌ನಲ್ಲಿ ಗ್ರಾಹಕರಿಗೆ ಪ್ರತಿದಿನ  2GB Hi-Speed DATA ಜೊತೆಯಲ್ಲಿ ಉಚಿತವಾಗಿ 100 SMS ಕಳುಹಿಸಬಹುದು. 347 ರೂ. ಪ್ಲಾನ್ 54 ದಿನದ ವ್ಯಾಲಿಡಿಟಿಯನ್ನು ಹೊಂದಿದೆ. ಈ ಪ್ಲಾನ್ ಜೊತೆ ಬಳಕೆದಾರರಿಗೆ ಹೆಚ್ಚುವರಿಯಾಗಿ 450 Live TV channel,  BiTV ಮತ್ತು OTT Application ಗಳ ಚಂದಾದಾರಿಕೆ ಉಚಿತವಾಗಿ ಸಿಗಲಿದೆ. 

Astrology : ಮಾರ್ಚ್ 05ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜೋತಿಷ್ಯ : 2025 ಮಾರ್ಚ್ 05ರ ಬುಧವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ
ನೋಡಿ.

*ಮೇಷ ರಾಶಿ*
ನಿರುದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿನ ನ್ಯೂನತೆಗಳನ್ನು ಸರಿಪಡಿಸಲಾಗುತ್ತದೆ. ಮನೆಯಲ್ಲಿ ಮಕ್ಕಳ ಶುಭಕಾರ್ಯದ ಪ್ರಸ್ತಾಪವಿರುತ್ತದೆ. ಆರ್ಥಿಕ ಪ್ರಗತಿ ಉಂಟಾಗುತ್ತದೆ. ಕೆಲವು ಕೆಲಸಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ. ದೂರ ಸ್ಥಳಗಳಲ್ಲಿ ದೈವಿಕ ದರ್ಶನ ಪಡೆಯುತ್ತೀರಿ.

*ವೃಷಭ ರಾಶಿ*
ದೈವಿಕ ಚಿಂತನೆ ಹೆಚ್ಚಾಗುತ್ತದೆ, ಸಾಲದ ಒತ್ತಡ ಹೆಚ್ಚಾಗುತ್ತದೆ. ವ್ಯಾಪಾರಗಳು ಸುಗಮವಾಗಿ ಸಾಗುತ್ತವೆ. ಪ್ರಮುಖ ಕಾರ್ಯಗಳು ನಿಧಾನವಾಗುತ್ತವೆ. ಕುಟುಂಬದಲ್ಲಿ ಕೆಲವರ ಮಾತುಗಳಿಂದ ವಿವಾದಕ್ಕೆ ಎಡೆಮಾಡಿಕೊಡುತ್ತದೆ. ಹಣದ ವಿಷಯದಲ್ಲಿ ತೊಂದರೆಗಳು ಉಂಟಾಗುತ್ತದೆ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆಗಳಿರುತ್ತವೆ.

*ಮಿಥುನ ರಾಶಿ*
ಆತ್ಮೀಯರೊಂದಿಗೆವಿವಾದಗಳಿರುತ್ತವೆ. ಕೈಗೊಂಡ ವ್ಯವಹಾರಗಳು ಮತ್ತಷ್ಟು ನಿಧಾನಗೊಳ್ಳುತ್ತವೆ. ಮಾನಸಿಕ ಸಮಸ್ಯೆಗಳು ಸ್ವಲ್ಪಮಟ್ಟಿಗೆ ನೋವುಂಟು ಮಾಡುತ್ತವೆ . ವೃತ್ತಿಪರ ವ್ಯವಹಾರಗಳು ನಿರುತ್ಸಾಹ ವಾತಾವರಣ ಇರುತ್ತದೆ. ಆದಾಯದ ಹರಿವು ನಿಧಾನವಾಗುತ್ತದೆ. ಉದ್ಯೋಗದಲ್ಲಿ ಇತರರಿಂದ ಟೀಕೆ ಹೆಚ್ಚಾಗುತ್ತದೆ.

*ಕಟಕ ರಾಶಿ*
ಉದ್ಯೋಗದಲ್ಲಿ ಒಂದು ಮಾಹಿತಿಯು ಆಸಕ್ತಿಯನ್ನುಂಟುಮಾಡುತ್ತದೆ. ವ್ಯಾಪಾರದಲ್ಲಿ ಹೊಸ ಆಲೋಚನೆಗಳೊಂದಿಗೆ ಮುಂದುವರಿಯುತ್ತೀರಿ. ಮೌಲ್ಯದ ವಸ್ತು ಮತ್ತು ವಾಹನಗಳನ್ನು ಖರೀದಿಸಲಾಗುತ್ತದೆ. ನಿರುದ್ಯೋಗಿಗಳ ಶ್ರಮಕ್ಕೆ ತಕ್ಕ ಫಲ ​​ದೊರೆಯುತ್ತದೆ. ಸಮಾಜದ ಹಿರಿಯರಿಂದ ಆಹ್ವಾನಗಳು ಬರುತ್ತವೆ. ಹೊಸ ವಾಹನ ಖರೀದಿಸಲಾಗುತ್ತದೆ.

*ಸಿಂಹ ರಾಶಿ*
ಸಮಾಜದಲ್ಲಿ ಪ್ರಮುಖರ ಪರಿಚಯ ಕೂಡಿ ಬರುವುದಿಲ್ಲ. ಕುಟುಂಬ ಸದಸ್ಯರ ವರ್ತನೆಯು ಸ್ವಲ್ಪ ಕಿರಿಕಿರಿಯುಂಟು ಮಾಡುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಒತ್ತಡ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಮನ್ನಣೆ ದೊರೆಯುವುದಿಲ್ಲ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಆದಾಯಕ್ಕೆ ಯಾವುದೇ ತೊಂದರೆ ಇರುವುದಿಲ್ಲ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಕನ್ಯಾ ರಾಶಿ*
ದೈವಿಕ ಕಾರ್ಯಗಳಿಗೆ ಹಣ ನೀಡುತ್ತೀರಿ. ಸ್ಥಿರ ಆಸ್ತಿ ಮಾರಾಟ ಲಾಭದಾಯಕವಾಗಿರುತ್ತದೆ. ಹಳೆ ಸಾಲಗಳನ್ನು ವಸೂಲಿ ಮಾಡಲಾಗುತ್ತದೆ. ವ್ಯಾಪಾರದಲ್ಲಿ ಉತ್ತಮ ಲಾಭ ಪಡೆಯುತ್ತೀರಿ. ಉದ್ಯೋಗಿಗಳಿಗೆ ಅನುಕೂಲಕರ ಪರಿಸ್ಥಿತಿಗಳಿರುತ್ತವೆ. ನೆರೆಹೊರೆಯವರೊಂದಿಗೆ ವಿವಾದಗಳಲ್ಲಿ ಮೇಲುಗೈ ಸಾಧಿಸುತ್ತೀರಿ. ರಾಜಕೀಯ ಸಭೆ ಸಮಾರಂಭಗಳಿಗೆ ಹಾಜರಾಗುತ್ತೀರಿ.

*ತುಲಾ ರಾಶಿ*
ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ವೈದ್ಯರ ಸಲಹೆ ಪಡೆಯುವುದು ಉತ್ತಮ. ಕೈಗೆತ್ತಿಕೊಂಡ ಕೆಲಸವನ್ನು ಅತ್ಯಂತ ಕಷ್ಟದಿಂದ ಪೂರ್ಣಗೊಳಿಸಲಾಗುತ್ತದೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಋಣಾತ್ಮಕ ಪರಿಸ್ಥಿತಿಗಳು ಇರುತ್ತವೆ. ಸ್ಥಿರಾಸ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ವಿವಾದಗಳು ಉಂಟಾಗುತ್ತವೆ. ಪ್ರಮುಖ ವಿಷಯಗಳಲ್ಲಿ ವಿಚಾರಗಳು ಕೂಡಿ ಬರುವುದಿಲ್ಲ.

*ವೃಶ್ಚಿಕ ರಾಶಿ*
ಬಂಧುಗಳ ಆಗಮನ ಸಂತಸ ತರುತ್ತದೆ. ಮನೆಯ ಹೊರಗೆ ವಾತವರಣ ಅನುಕೂಲಕರವಾಗಿರುತ್ತದೆ. ಸಮಾಜದಲ್ಲಿ ಗೌರವಕ್ಕೆ ಕೊರತೆ ಇರುವುದಿಲ್ಲ. ಉದ್ಯೋಗದಲ್ಲಿ ಬಡ್ತಿ ಹೆಚ್ಚಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ನಿಮ್ಮ ಭವಿಷ್ಯವಾಣಿಗಳು ನಿಜವಾಗುತ್ತವೆ. ಸ್ವಲ್ಪ ಮಟ್ಟಿಗೆ ಹಣಕಾಸಿನ ತೊಂದರೆಗಳಿಂದ ಮುಕ್ತರಾಗುತ್ತೀರಿ.

*ಧನುಸ್ಸು ರಾಶಿ*
ವೃತ್ತಿಯಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ. ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಪೂರ್ಣಗೊಳಿಸಿ ಲಾಭ ಪಡೆಯುತ್ತೀರಿ. ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಗೌರವ ಹೆಚ್ಚಾಗುತ್ತದೆ. ಸ್ನೇಹಿತರೊಂದಿಗೆ ಶುಭ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ಸ್ಥಿರಾಸ್ತಿ ಖರೀದಿಯ ಪ್ರಯತ್ನಗಳು ವೇಗಗೊಳ್ಳುತ್ತವೆ.

*ಮಕರ ರಾಶಿ*
ಇತರರೊಂದಿಗೆ ಆತುರದಿಂದ ಮಾತನಾಡುವುದು ಒಳ್ಳೆಯದಲ್ಲ. ದೂರದ ಪ್ರಯಾಣದ ಸೂಚನೆಗಳಿವೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ವರ್ತನೆಯು ಸ್ವಲ್ಪ ಕಿರಿಕಿರಿಯನ್ನು ಉಂಟುಮಾಡುತ್ತದೆ. ವ್ಯಾಪಾರಗಳು ನಿರೀಕ್ಷಿತ ಮಟ್ಟದಲ್ಲಿ ನಡೆಯುವುದಿಲ್ಲ. ಬಂಧುಗಳೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು.

*ಕುಂಭ ರಾಶಿ*
ವಾಹನ ಪ್ರಯಾಣದಲ್ಲಿ ಜಾಗ್ರತೆ ವಹಿಸಬೇಕು. ಕೆಲವು ಕೆಲಸಗಳು ನಿಗದಿತ ಸಮಯಕ್ಕೆ ಪೂರ್ಣಗೊಳ್ಳದ ಕಾರಣ ಖರ್ಚಿಗೆ ತಕ್ಕ ಆದಾಯ ದೊರೆಯುವುದಿಲ್ಲ . ಉದ್ಯೋಗದಲ್ಲಿ ಸ್ಥಾನ ಚಲನೆ ಸೂಚನೆಗಳಿವೆ. ವೃತ್ತಿಪರ ವ್ಯವಹಾರಗಳು ನಿಧಾನವಾಗಿರುತ್ತವೆ. ಹೊಸ ಸಾಲದ ಪ್ರಯತ್ನಗಳು ವ್ಯರ್ಥವಾಗಿ ಉಳಿಯುತ್ತವೆ.

*ಮೀನ ರಾಶಿ*
ಎಲ್ಲಾ ಕ್ಷೇತ್ರಗಳು ಲಾಭದಾಯಕವಾಗಿರುತ್ತವೆ. ವಾಹನ ಖರೀದಿ ಪ್ರಯತ್ನ ಫಲ ನೀಡುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಸಮಾಜದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರದಲ್ಲಿನ ಸಮಸ್ಯೆಗಳು ದೂರವಾಗುತ್ತವೆ. ದೀರ್ಘಕಾಲದ ವಿವಾದಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Belagavi : ಪ್ರೇಯಸಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ.!

ಬೆಳಗಾವಿ : ಬೆಳಗಾವಿಯ ಶಹಾಪುರದ (Shahpur, Belagavi) ನವಿಗಲ್ಲಿಯಲ್ಲಿ ಯುವಕನೋರ್ವ ಪ್ರೇಯಸಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿ ಬಳಿಕ ತಾನೂ ಸಹ ಆತ್ಮಹತ್ಯೆಗೆ ಶರಣಾಗಿರುವ (Committed to suicide) ಘಟನೆ ನಡೆದಿದೆ.

ಪ್ರಿಯಕರ ಪ್ರಶಾಂತ್ ಕುಂಡೇಕರ (29) ತನ್ನ ಪ್ರೇಯಸಿ ಐಶ್ವರ್ಯಾ (18) ಳನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದ ಸ್ಯಾಂಡಲ್ ವುಡ್ Actress.!

ಇಂದು (ಮಾರ್ಚ್​ 04) ಚಿಕ್ಕಮ್ಮನ ಮನೆಗೆ ಬಂದಿದ್ದ ಐಶ್ವರ್ಯಾ ಹಾಗೂ ಪ್ರಶಾಂತ್ ವಿಷ ಸೇವಿಸಿ ಸಾಯಲು ಯತ್ನಿಸಿದ್ದಾರೆ.

ನಂತರ ಚಾಕುವಿನಿಂದ ಪ್ರೇಯಸಿ ಐಶ್ವರ್ಯಾಳ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಬಳಿಕ ಅದೇ ಚಾಕುವಿನಿಂದ ತನ್ನ ಕತ್ತು ಕೊಯ್ದುಕೊಂಡು ಪ್ರಾಣ ಬಿಟ್ಟಿದ್ದಾನೆ ಎನ್ನಲಾಗಿದೆ.

ಇದನ್ನು ಓದಿ : ರಾಯಭಾಗ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ರ್ಯಾಕ್ಟರ್ ; ಇಬ್ಬರು ಸಾವು, 20 ಜನರಿಗೆ ಗಾಯ.!

ಐಶ್ವರ್ಯಾ ಹಾಗೂ ಪ್ರಶಾಂತ್ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು (Both are in love with each other), ಇವರಿಬ್ಬರು ಇಂದು ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿರುವ ಐಶ್ವರ್ಯಾಳ ಚಿಕ್ಕಮ್ಮನ ಮನೆ ಬಂದಿದ್ದರು.

ಆದರೆ ಏನಾಯ್ತೋ ಅಂತ ಗೊತ್ತಿಲ್ಲ. ಇದ್ದಕ್ಕಿದ್ದಂತೆ ಇಬ್ಬರು ವಿಷಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ. ಬಳಿಕ ಪ್ರಶಾಂತ್ ಚಾಕುವಿನಿಂದ ಐಶ್ವರ್ಯಳ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. ಬಳಿಕ ಪ್ರಕಾಶ್​ ಅದೇ ಚಾಕುವಿನಿಂದ ತನ್ನ ಕುತ್ತಿಗೆ ಕೊಯ್ದುಕೊಂಡು ಪ್ರಾಣ ಬಿಟ್ಟಿದ್ದಾನೆ.

ಇದನ್ನು ಓದಿ : ಮಾರ್ಕೆಟ್‌ನಲ್ಲಿ ಅನುಚಿತ ವರ್ತನೆ ತೋರಿದ ವ್ಯಕ್ತಿಗೆ ಮಹಿಳೆ ಮಾಡಿದ್ದೇನು ಗೊತ್ತೇ.? ಈ ವಿಡಿಯೋ ನೋಡಿ.!

ಇವರಿಬ್ಬರ ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಹಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ನಂತರ ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಹಾಗೂ ಡಿಸಿಪಿ ರೋಹನ್ ಜಗದೀಶ್ ಸಹ ಸ್ಥಳಕ್ಕೆ ಭೇಟಿ ನೀಡಿದರು ಎಂದು ತಿಳಿದು ಬಂದಿದೆ.

ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದ ಸ್ಯಾಂಡಲ್ ವುಡ್ Actress.!

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು​ ವಶಕ್ಕೆ ಪಡೆಯಲಾಗಿದೆ.

ಇದನ್ನು ಓದಿ : Facebook ಲವರ್ ಜೊತೆ ಓಡಿ ಹೋದ ಎರಡು ಮಕ್ಕಳ ತಾಯಿ ; ವಿಡಿಯೋ ವೈರಲ್.!

ರನ್ಯಾ ರಾವ್ ಅವರು ಸುದೀಪ್ ನಟನೆಯ ‘ಮಾಣಿಕ್ಯ’ ಸಿನಿಮಾದಲ್ಲಿ ನಟಿಸಿದ್ದರು. ಈಕೆ ಡಿಜಿಪಿ ರಾಮಚಂದ್ರ ರಾವ್ ಸಂಬಂಧಿ ಎನ್ನಲಾಗಿದೆ.

ರನ್ಯಾ ದುಬೈನಿಂದ ಬೆಂಗಳೂರಿಗೆ ಮರಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಏರ್​ಪೋರ್ಟ್​ ಕಸ್ಟಮ್ಸ್​ನ ಡಿಆರ್​ಐ ಅಧಿಕಾರಿಗಳು ನಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ (The actress has been detained and interrogated).

ಇದನ್ನು ಓದಿ : ರಾಯಭಾಗ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ರ್ಯಾಕ್ಟರ್ ; ಇಬ್ಬರು ಸಾವು, 20 ಜನರಿಗೆ ಗಾಯ.!

ಸುಮಾರು 15 ಕೆಜಿ ಚಿನ್ನ ಅಕ್ರಮ ಸಾಗಾಟ ಆರೋಪದಲ್ಲಿ ನಟಿ ರನ್ಯಾ ರಾವ್ ರನ್ನು ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Astrology : ಮಾರ್ಚ್ 04ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜೋತಿಷ್ಯ : 2025 ಮಾರ್ಚ್ 04ರ ಮಂಗಳವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ
ನೋಡಿ.

*ಮೇಷ ರಾಶಿ*
ದೈವಿಕ ಚಿಂತನೆ ಹೆಚ್ಚಾಗುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ದತೆ ಉಂಟಾಗುತ್ತದೆ. ಬಾಲ್ಯದ ಗೆಳೆಯರೊಂದಿಗೆ ಖುಷಿಯಿಂದ ಕಾಲ ಕಳೆಯುತ್ತೀರಿ. ನಿರುದ್ಯೋಗಿ ಪ್ರಯತ್ನಗಳು ಫಲ ನೀಡುತ್ತವೆ ಮತ್ತು ಸಂಬಂಧಿಕರೊಂದಿಗಿನ ಭಿನ್ನಾಭಿಪ್ರಾಯಗಳು ದೂರವಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ವೇಗಗೊಳ್ಳುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅನುಕೂಲಕರ ಪರಿಸ್ಥಿತಿಗಳು ಇರುತ್ತವೆ.

*ವೃಷಭ ರಾಶಿ*
ಆರೋಗ್ಯದಲ್ಲಿ ಕಾಳಜಿ ಅಗತ್ಯ. ದೂರದ ಪ್ರಯಾಣದ ಸೂಚನೆಗಳಿವೆ. ಸ್ನೇಹಿತರೊಂದಿಗಿನ ವಿವಾದಗಳು ಕೆಲವು ಭಾವನಾತ್ಮಕ ಕಿರಿಕಿರಿಯನ್ನು ಉಂಟುಮಾಡುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ವ್ಯಾಪಾರಗಳು ಮತ್ತು ಉದ್ಯೋಗಗಳು ಸ್ವಲ್ಪ ಮಟ್ಟಿಗೆ ನಿರುತ್ಸಾಹಗೊಳಿಸುತ್ತವೆ. ಕೈಗೊಂಡ ವ್ಯವಹಾರಗಳಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಕಂಡುಬರುವುದಿಲ್ಲ. ಸೋದರಸಂಬಂಧಿಗಳೊಂದಿಗೆ ಸ್ಥಿರಾಸ್ತಿ ವಿವಾದಗಳಿರುತ್ತವೆ.

*ಮಿಥುನ ರಾಶಿ*
ಕಠಿಣ ಪರಿಶ್ರಮಕ್ಕೆ ತಕ್ಕ ಫಲ ದೊರೆಯುವುದಿಲ್ಲ. ಕುಟುಂಬ ಸದಸ್ಯರೊಂದಿಗೆ ಸಣ್ಣ ಭಿನ್ನಾಭಿಪ್ರಾಯಗಳಿರುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ನಿರ್ಧಾರಗಳನ್ನು ಆಕಸ್ಮಿಕವಾಗಿ ತೆಗೆದುಕೊಳ್ಳಲಾಗುತ್ತದೆ. ಉದ್ಯೋಗದ ವಾತಾವರಣವು ಗೊಂದಲಮಯವಾಗಿರುತ್ತದೆ. ಪ್ರಮುಖ ವಿಷಯಗಳಲ್ಲಿ ಆತುರ ಒಳ್ಳೆಯದಲ್ಲ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಕಟಕ ರಾಶಿ*
ಭೂಮಿ ಮಾರಾಟ ಲಾಭದಾಯಕವಾಗಿರುತ್ತದೆ. ಪ್ರಮುಖ ವ್ಯಕ್ತಿಗಳಿಂದ ಒಂದು ವ್ಯವಹಾರದಲ್ಲಿ ಮಹತ್ವದ ಮಾಹಿತಿ ಸಿಗುತ್ತದೆ. ಹೊಸ ವ್ಯವಹಾರಗಳು ಲಾಭದಾಯಕವಾಗುತ್ತವೆ. ಉದ್ಯೋಗದಲ್ಲಿನ ಸಮಸ್ಯೆಗಳು ನಿವಾರಣೆಯಾಗುತ್ತವೆ. ಭೋಜನ ಮನರಂಜನಾ ಕಾರ್ಯಕ್ರಮಗಳಿಗೆ ಆಹ್ವಾನಗಳು ಬರುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ.

*ಸಿಂಹ ರಾಶಿ*
ವೃತ್ತಿಪರ ವ್ಯವಹಾರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಉದ್ಯೋಗಿಗಳು ಹೊಸ ಅವಕಾಶಗಳನ್ನು ಪಡೆಯುತ್ತೀರಿ. ಕೈಗೊಂಡ ಕಾರ್ಯಗಳು ಸುಗಮವಾಗಿ ಸಾಗುತ್ತವೆ. ಸಂಬಂಧಿಕರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ.

*ಕನ್ಯಾ ರಾಶಿ*
ವಿದ್ಯಾರ್ಥಿಗಳ ಪರಿಶ್ರಮಕ್ಕೆ ತಕ್ಕ ಫಲ ದೊರೆಯುತ್ತದೆ. ಬಂಧುಮಿತ್ರರೊಂದಿಗಿನ ವಿವಾದಗಳು ಕಿರಿ ಕಿರಿ ಉಂಟು ಮಾಡುತ್ತದೆ . ಬಂಧುಗಳಿಂದ ಆಶ್ಚರ್ಯಕರ ಸಂಗತಿಗಳು ಬೆಳಕಿಗೆ ಬರುತ್ತವೆ. ವ್ಯರ್ಥ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳು ತೃಪ್ತಿಕರವಾಗಿ ಸಾಗುತ್ತವೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

*ತುಲಾ ರಾಶಿ*
ವ್ಯಾಪಾರ ವಹಿವಾಟು ಸುಗಮವಾಗಿ ಸಾಗುತ್ತದೆ. ಉದ್ಯೋಗದಲ್ಲಿ ಕೆಲವು ತೊಂದರೆಗಳು ಉಂಟಾಗುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಮಸ್ಯೆಗಳಿರುತ್ತವೆ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ಪ್ರಮುಖ ವಿಷಯಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಬಾಲ್ಯದ ಗೆಳೆಯರೊಂದಿಗೆ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತೀರಿ. ಬಂಧು ಮಿತ್ರಯರೊಂದಿಗಿನ ವಿವಾದಗಳು ಸ್ವಲ್ಪ ನೋವುಂಟು ಮಾಡುತ್ತವೆ.

*ವೃಶ್ಚಿಕ ರಾಶಿ*
ಬಂಧುಗಳೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ. ಮನೆಯ ವಾತಾವರಣವು ತೃಪ್ತಿಕರವಾಗಿರುತ್ತದೆ. ಹೊಸ ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತದೆ. ಸ್ಥಿರಾಸ್ತಿ ಖರೀದಿಯ ಪ್ರಯತ್ನಗಳು ವೇಗಗೊಳ್ಳುತ್ತವೆ. ಉದ್ಯೋಗದಲ್ಲಿ ಬಡ್ತಿ ಹೆಚ್ಚಾಗುತ್ತದೆ. ನಿರುದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯಾಪಾರ ಸುಗಮವಾಗಿ ಸಾಗುತ್ತದೆ.

*ಧನುಸ್ಸು ರಾಶಿ*
ಆರ್ಥಿಕ ಪರಿಸ್ಥಿತಿ ಸ್ವಲ್ಪ ನಿರಾಶಾದಾಯಕವಾಗಿರುತ್ತದೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಸಹೋದರರೊಂದಿಗಿನ ಸ್ಥಿರಾಸ್ತಿ ಒಪ್ಪಂದಗಳು ಮುಂದೂಡಲ್ಪಡುತ್ತವೆ. ವೃತ್ತಿಪರ ವ್ಯವಹಾರಗಳು ಸೀಮಿತಗೊಳ್ಳಲಿವೆ. ಉದ್ಯೋಗಿಗಳಿಗೆ ಅಧಿಕಾರಿಗಳೊಂದಿಗೆ ಸಣ್ಣಪುಟ್ಟ ಸಮಸ್ಯೆಗಳು ಉಂಟಾಗುತ್ತದೆ ಮತ್ತು ಒಂದು ವ್ಯವಹಾರದಲ್ಲಿ ಆತ್ಮೀಯರೊಂದಿಗೆ ಭಿನ್ನಾಭಿಪ್ರಾಯ ಉಂಟಾಗುತ್ತದೆ.

*ಮಕರ ರಾಶಿ*
ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ದೂರ ಪ್ರಯಾಣದಲ್ಲಿ ಹೊಸ ಪರಿಚಯವಾಗುತ್ತದೆ. ಬಾಲ್ಯ ಮಿತ್ರರೊಂದಿಗೆ ಸೌಹಾರ್ದಯುತವಾಗಿ ವರ್ತಿಸುತ್ತೀರಿ. ಉದ್ಯೋಗಿಗಳಿಗೆ ಬಡ್ತಿ ಹೆಚ್ಚಾಗುತ್ತದೆ, ಆರ್ಥಿಕ ಪರಿಸ್ಥಿತಿ ಆಶಾದಾಯಕವಾಗಿರುತ್ತದೆ. ಸಮಾಜದಲ್ಲಿ ಗೌರವಕ್ಕೆ ಕೊರತೆ ಇರುವುದಿಲ್ಲ. ಮೌಲ್ಯದ ಉಡುಪುಗಳನ್ನು ಖರೀದಿಸಲಾಗುತ್ತದೆ.

*ಕುಂಭ ರಾಶಿ*
ಕುಟುಂಬ ಸದಸ್ಯರೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ. ಹಣಕಾಸಿನ ತೊಂದರೆಗಳಿಂದ ಹೊಸ ಸಾಲಗಳನ್ನು ಮಾಡಲಾಗುತ್ತದೆ. ಪ್ರಮುಖ ವ್ಯವಹಾರಗಳು ನಿರೀಕ್ಷೆಯಂತೆ ನಡೆಯುತ್ತವೆ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ವೃತ್ತಿಪರ ವ್ಯವಹಾರಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ.

*ಮೀನ ರಾಶಿ*
ಪ್ರಮುಖರ ಪರಿಚಗಳು ಉತ್ಸಾಹದಾಯಕವಾಗಿರುತ್ತದೆ. ಸಂಬಂಧಿಕರಿಂದ ಶುಭ ಸುದ್ದಿ ದೊರೆಯುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಪ್ರಗತಿ ಕಂಡುಬರುತ್ತದೆ. ಭೋಜನ ಮನರಂಜನಾ ಕಾರ್ಯಕ್ರಮಗಳಿಗೆ ಹಾಜರಾಗುತ್ತೀರಿ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗಗಳು ಹೆಚ್ಚು ಅನುಕೂಲಕರ ಪರಿಸ್ಥಿತಿಗಳನ್ನು ಹೊಂದಿರುತ್ತವೆ. ಮನೆಯ ಹೊರಗೆ ಅನುಕೂಲಕರ ವಾತಾವರಣವಿರುತ್ತದೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Chicken ಸೇವನೆಗೆ ಪಶುಸಂಗೋಪನೆ ಇಲಾಖೆಯಿಂದ ಗೈಡ್‌ಲೈನ್ಸ್‌.!

ಬೆಂಗಳೂರು : ರಾಜ್ಯದಲ್ಲಿ ದಿನೇದಿನೇ ಹಕ್ಕಿಜ್ವರದ (bird flu) ಭೀತಿ ಹೆಚ್ಚಾಗುತ್ತಲೇ ಇದ್ದು, ಹಕ್ಕಿಜ್ವರ ನಿಯಂತ್ರಣಕ್ಕಾಗಿ ಪಶುಸಂಗೋಪನೆ ಇಲಾಖೆ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

ಕೋಳಿ ಮಾಂಸ ಸೇವನೆಗೆ ಮಾರ್ಗಸೂಚಿ :
* 70 ಡಿಗ್ರಿ ಸೆಂಟಿಗ್ರೇಡ್ ಅಧಿಕ ಉಷ್ಣಾಂಶದಲ್ಲಿ, ಕನಿಷ್ಠ 30 ನಿಮಿಷ ಕೋಳಿ ಬೇಯಿಸಿ ಕೋಳಿ ಮಾಂಸ ಮತ್ತು ಮೊಟ್ಟೆ ತಿನ್ನಬಹುದು.

ಇದನ್ನು ಓದಿ : Facebook ಲವರ್ ಜೊತೆ ಓಡಿ ಹೋದ ಎರಡು ಮಕ್ಕಳ ತಾಯಿ ; ವಿಡಿಯೋ ವೈರಲ್.!

* ಕೋಳಿ ಮಾಂಸ ಅಡುಗೆ ಮಾಡುವವರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು.

* ಕೋಳಿ ಮಾಂಸವನ್ನ ತಯಾರಿಸಿದ ನಂತರ ನಂಜುನಾಶಕದಿಂದ ಕೈಗಳನ್ನು ಶುಚಿಗೊಳಿಸಿಕೊಳ್ಳಬೇಕು (Hands should be cleaned with disinfectant).

* ಹಸಿ ಕೋಳಿಮಾಂಸ, ಅದರ ದ್ರವಗಳು ಅಥವಾ ಬೇಯಿಸಿದ ಮೊಟ್ಟೆಯನ್ನು, ಬೇಯಿಸದೇ ಉಪಯೋಗಿಸುವ ಆಹಾರ ಪದಾರ್ಥಗಳು ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು.

ಇದನ್ನು ಓದಿ : ರಾಯಭಾಗ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ರ್ಯಾಕ್ಟರ್ ; ಇಬ್ಬರು ಸಾವು, 20 ಜನರಿಗೆ ಗಾಯ.!

* ಬೇಯಿಸದಿರುವ ಅಥವಾ ಅರೆಬೆಂದ ಮೊಟ್ಟೆಯನ್ನು ತಿನ್ನಬಾರದು.

* ಅಧಿಕ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಹೆಚ್ಚಿನ ಕಾಲ ಬದುಕುಳಿಯುವುದಿಲ್ಲ. ಹೀಗಾಗಿ ಬೇಯಿಸಿದ ಆಹಾರ ಸೇವನೆ ಸುರಕ್ಷಿತ.

ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮ :
* ಸಾರ್ವಜನಿಕರು ಅನಗತ್ಯವಾಗಿ ಕೋಳಿ ಫಾರಂಗೆ ಭೇಟಿ ಕೊಡಬಾರದು.

ಇದನ್ನು ಓದಿ : ಮಾರ್ಕೆಟ್‌ನಲ್ಲಿ ಅನುಚಿತ ವರ್ತನೆ ತೋರಿದ ವ್ಯಕ್ತಿಗೆ ಮಹಿಳೆ ಮಾಡಿದ್ದೇನು ಗೊತ್ತೇ.? ಈ ವಿಡಿಯೋ ನೋಡಿ.!

* ಕೋಳಿ ಫಾರಂನಲ್ಲಿ ಕೆಲಸ ಮಾಡುವ ಕೆಲಸಗಾರರು ತಮ್ಮ ಬಟ್ಟೆ, ಶೂ ಹಾಗೂ ಕೈ, ಕಾಲುಗಳಿಗೆ ನಂಜುನಾಶಕ ದ್ರಾವಣ ಸಿಂಪಡಿಸಬೇಕು.

* ಕೋಳಿ ಫಾರಂನಲ್ಲಿ ಕೋಳಿಗಳ ಸಂಪರ್ಕಕ್ಕೆ ಬೇರೆ ಹಕ್ಕಿಗಳು ಬರದಂತೆ ಎಚ್ಚರಿಕೆ ವಹಿಸಬೇಕು.

ಇದನ್ನು ಓದಿ : ಹೆದ್ದಾರಿ ದಾಟುವಾಗ ಡಿಕ್ಕಿ ಹೊಡೆದ ಕಾರು ; ಗಾಳಿಯಲ್ಲಿ 10 ಅಡಿ ತೂರಿ ಹೋಗಿ ಬಿದ್ದ ಮಹಿಳೆ ; ಭಯಾನಕ ವಿಡಿಯೋ ವೈರಲ್.!

* ಕೋಳಿ ಸಾಕಾಣಿಕೆಗೆ ಬೇಕಾಗುವ ಸಲಕರಣೆಗಳನ್ನ ಬೇರೆ ಕೋಳಿ ಫಾರಂನಿಂದ ಪಡೆಯಬೇಕಾದರೆ ಸ್ಯಾನಿಟೈಸೆಷನ್ ಮಾಡಬೇಕು ಮತ್ತು ನಂಜುನಾಶಕವನ್ನ ಅಳವಡಿಸಬೇಕು.

* ಕೋಳಿ ಪಂಜರಗಳನ್ನ ದಿನನಿತ್ಯ ಶುಚಿ ಮಾಡುವುದು. ಆಹಾರ ಮತ್ತು ನೀರನ್ನ ಪ್ರತಿದಿನ ಬದಲಾಯಿಸುವುದು.

error: Content is protected !!