Google search engine
Home Blog Page 5

ಕುಂಭಮೇಳದಲ್ಲಿ ಭಾಗವಹಿಸಲಾಗದ ಪತಿಗೆ Video ಕಾಲ್ ಮೂಲಕ ಪವಿತ್ರಸ್ನಾನ ಮಾಡಿಸಿದ ಪತ್ನಿ ವಿಡಿಯೋ ವೈರಲ್.

0

ಪ್ರಯಾಗ್‌ರಾಜ್‌ : ಪತಿಗೆ ಮಹಾಕುಂಭ ಮೇಳದಲ್ಲಿ ಭಾಗವಹಿಸಿ ಶಾಹಿ ಸ್ನಾನ ಮಾಡಲು ಸಾಧ್ಯವಾಗದ ಹಿನ್ನಲೆಯಲ್ಲಿ ಆತನ ಪತ್ನಿ ಅಪರೂಪದ ರೀತಿಯಲ್ಲಿ ಕುಂಭ ಮೇಳದಲ್ಲಿ ಸ್ನಾನ ಮಾಡಿಸಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಕತ್‌ ವೈರಲ್‌ ಆಗುತ್ತಿದೆ.

ಈ ಮಹಿಳೆ ತನ್ನ ಜೊತೆ ಪತಿ ಇಲ್ಲದೆ ಮಹಾಕುಂಭ ಮೇಳದಲ್ಲಿ ಭಾಗವಹಿಸಿದ್ದಾರೆ.  ಆಗ ಪತ್ನಿ ತನ್ನ ಪತಿಗೆ ಮೊಬೈಲ್ ಫೋನ್‌ ಮೂಲಕ ವಿಡಿಯೋ ಕಾಲ್‌ ಮಾಡಿದ್ದಾರೆ. ಮೊಬೈಲ್‌ನಲ್ಲಿ ಪತಿ ಕಾಣುತ್ತಿದಂತೆಯೇ ಅವರೊಂದಿಗೆ ಮಾತನಾಡುತ್ತ ಆ ಮೊಬೈಲ್‌ ಫೋನ್‌ನ್ನು ನೀರಿನಲ್ಲಿ ಮುಳುಗಿಸುತ್ತಾರೆ. ಹೀಗೆ ಮೊಬೈಲ್‌ ಫೋನ್‌ನ್ನು ನೀರಿನಲ್ಲಿ ಮುಳುಗಿಸುವುದನ್ನು ವೈರಲ್‌ ವಿಡಿಯೋದಲ್ಲಿ ನೋಡಬಹುದಾಗಿದೆ.

ಇದನ್ನು ಓದಿ : ಕಂಡಕ್ಟರ್ ವಿರುದ್ಧ ಪೋಕ್ಸೋ Case ಹಿಂಪಡೆದ ಬಾಲಕಿಯ ಕುಟುಂಬಸ್ಥರು.!

ಪತಿ ಪವಿತ್ರ ಧಾರ್ಮಿಕ ಕಾರ್ಯಕ್ರಮವಾದ ಮಹಾಕುಂಭ ಮೇಳದಲ್ಲಿ ಭಾಗವಹಿಸಲು ಆಗದಿದ್ದರೂ ಸಹ ಪತ್ನಿ ತನ್ನ ಪತಿಗೆ ಸಾಂಕೇತವಾಗಿ ಅಥವಾ ಅಪರೋಕ್ಷವಾಗಿ Live Vedio call ನಲ್ಲಿ ಪತಿ ಕಾಣುವಾಗ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿಸಿರುವುದಂತೆ ಅಮೋಘ.

ಕುಂಭಮೇಳಕ್ಕೆ 700 ವರ್ಷಗಳ ಇತಿಹಾಸವಿದೆ. ಇವುಗಳನ್ನು ಅರ್ಧ ಕುಂಭ ಮೇಳ, ಪೂರ್ಣ ಕುಂಭ ಮೇಳ, ಮಹಾ ಕುಂಭಮೇಳವೆಂದು ನಿರ್ದಿಷ್ಟವಾಗಿ ವರ್ಗೀಕರಿಸಲಾಗಿದೆ. ಪ್ರತಿ 12 ವರ್ಷಕ್ಕೊಮ್ಮೆ ಪೂರ್ಣ ಕುಂಭ ಮೇಳ ನಡೆಯುತ್ತದೆ. ಅದರಂತೆ ಪ್ರತಿ 6 ವರ್ಷಕ್ಕೊಮ್ಮೆ ಅರ್ಧ ಕುಂಭ ಮೇಳ ಆಯೋಜಿಸಲಾಗುತ್ತಿದೆ. ಹೀಗೆ, ಪ್ರತಿ 12 ವರ್ಷಕ್ಕೊಮ್ಮೆ 12 ಪೂರ್ಣ ಕುಂಭ ಮೇಳಗಳು ನಡೆದ ನಂತರ ಬರುವುದೇ ಮಹಾ ಕುಂಭಮೇಳ.

ಇದನ್ನು ಓದಿ : ಹೆದ್ದಾರಿ ದಾಟುವಾಗ ಡಿಕ್ಕಿ ಹೊಡೆದ ಕಾರು ; ಗಾಳಿಯಲ್ಲಿ 10 ಅಡಿ ತೂರಿ ಹೋಗಿ ಬಿದ್ದ ಮಹಿಳೆ ; ಭಯಾನಕ ವಿಡಿಯೋ ವೈರಲ್.!

ಇಂದು (ಫೆ.26) ಮಹಾಶಿವರಾತ್ರಿ, ಅಂದರೆ ಮಹಾ ಕುಂಭಮೇಳದ ಕೊನೆಯ ದಿನ. ಕಳೆದ 144 ವರ್ಷಗಳ ನಂತರ ನಡೆಯುತ್ತಿರುವ ಮಹಾ ಕುಂಭಮೇಳದ ಕೊನೆಯ ಪುಣ್ಯಸ್ನಾನಕ್ಕೆ ಕೋಟ್ಯಂತರ ಮಂದಿ ಆಗಮಿಸಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಇಲ್ಲಿಯವರೆಗೆ ಸುಮಾರು 62 ಕೋಟಿ ಜನರು ಈ ತ್ರವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದರೆ.

ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು, ಪ್ರಧಾನಿ ಶ್ರೀ ನರೇಂದ್ರ ಮೋದಿ, ಯುಪಿ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ ಸೇರಿದಂತೆ ಸಾವಿರಾರು ಸಂಖ್ಯೆಯ ಗಣ್ಯರು ಈ ಪವಿತ್ರ ಸ್ಥಳದಲ್ಲಿ ಶಾಹಿ ಸ್ನಾನ ಮಾಡಿದ್ದಾರೆ.

ವಿಡಿಯೋ ನೋಡಿ :

Astrology : ಫೆಬ್ರುವರಿ 26ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜೋತಿಷ್ಯ : 2025 ಫೆಬ್ರುವರಿ 26ರ ಬುಧವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ
ನೋಡಿ.

*ಮೇಷ ರಾಶಿ*
ವ್ಯಾಪಾರ-ವ್ಯವಹಾರಗಳು ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತವೆ. ಹೊಸ ವ್ಯವಹಾರಗಳು ಪ್ರಾರಂಭವಾಗುತ್ತವೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಧನ ವ್ಯವಹಾರಗಳು ಕೂಡಿ ಬರುತ್ತವೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಕೌಟುಂಬಿಕ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಉದ್ಯೋಗದ ವಿಷಯದಲ್ಲಿ ಅಧಿಕ ಚರ್ಚೆಗಳು ಯಶಸ್ವಿಯಾಗುತ್ತವೆ.

*ವೃಷಭ ರಾಶಿ*
ವ್ಯಾಪಾರ-ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಪ್ರೀತಿಪಾತ್ರರೊಂದಿಗಿನ ಭಿನ್ನಾಭಿಪ್ರಾಯಗಳು ಕಿರಿಕಿರಿಯನ್ನುಂಟು ಮಾಡುತ್ತವೆ. ಹಠಾತ್ ಪ್ರಯಾಣದ ಸೂಚನೆಗಳಿವೆ. ನಿರುದ್ಯೋಗ ಪ್ರಯತ್ನಗಳು ನಿರುತ್ಸಾಹಗೊಳಿಸುತ್ತವೆ. ಸಾಲದ ಪ್ರಯತ್ನಗಳು ಫಲಿಸುವುದಿಲ್ಲ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಕೈಗೊಂಡ ಕಾರ್ಯಗಳಲ್ಲಿ ವಿಳಂಬ ಉಂಟಾಗುತ್ತವೆ.

*ಮಿಥುನ ರಾಶಿ*
ಆಪ್ತ ಸ್ನೇಹಿತರಿಂದ ಅಮೂಲ್ಯ ಮಾಹಿತಿ ಸಂಗ್ರಹಿಸುತ್ತೀರಿ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಹಿರಿಯರ ಪರಿಚಯಗಳು ಹೆಚ್ಚಾಗುತ್ತದೆ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ವೃತ್ತಿಪರ ಉದ್ಯೋಗಗಳು ಅನುಕೂಲಕರ ವಾತಾವರಣ ಇರುತ್ತದೆ. ಬಾಲ್ಯದ ಸ್ನೇಹಿತರಿಂದ ಆರ್ಥಿಕ ಸಹಾಯ ಬರುತ್ತದೆ.

*ಕಟಕ ರಾಶಿ*
ವ್ಯಾಪಾರದಲ್ಲಿ ಸ್ಥಿರವಾದ ಆಲೋಚನೆಗಳನ್ನು ಮಾಡಲು ಸಾಧ್ಯವಾಗದೆ ತೊಂದರೆ ಅನುಭವಿಸುತ್ತೀರಿ. ಕೈಗೊಂಡ ಕೆಲಸದಲ್ಲಿ ಹೆಚ್ಚಿನ ಪ್ರಯತ್ನದಿಂದ ಕಡಿಮೆ ಫಲಿತಾಂಶವನ್ನು ಪಡೆಯುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚಾಗುತ್ತವೆ. ವ್ಯರ್ಥ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ಸಾಲದ ಹೊರೆ ಹೆಚ್ಚಾಗುತ್ತದೆ.

*ಸಿಂಹ ರಾಶಿ*
ವೃತ್ತಿಪರ ವ್ಯವಹಾರದಲ್ಲಿ ಕಠಿಣ ಪರಿಶ್ರಮದ ಫಲವಾಗಿ ಹೊಸ ಲಾಭವನ್ನು ಪಡೆಯುತ್ತೀರಿ. ಸ್ಥಿರಾಸ್ತಿ ವ್ಯವಹಾರಗಳು ಕೂಡಿ ಬರುತ್ತವೆ. ದೀರ್ಘಾವಧಿ ಸಾಲಗಳಿಂದ ಮುಕ್ತಿ ಪಡೆಯುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ ದೊರೆಯುತ್ತದೆ. ನಿರುದ್ಯೋಗ ಪ್ರಯತ್ನಗಳು ಲಾಭದಾಯಕವಾಗಿರುತ್ತದೆ. ಪ್ರಯಾಣದ ಸಮಯದಲ್ಲಿ ಹೊಸ ವ್ಯಕ್ತಿಗಳ ಪರಿಚಯಗಳು ಉತ್ಸಾಹದಾಯಕವಾಗಿರುತ್ತದೆ.

*ಕನ್ಯಾ ರಾಶಿ*
ಪ್ರಮುಖ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಹಳೆ ಸಾಲಗಳನ್ನು ಸಂಗ್ರಹಿಸಲಾಗುತ್ತದೆ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಫಲ ನೀಡುತ್ತವೆ. ಉದ್ಯೋಗದಲ್ಲಿ ಬಡ್ತಿ ದೊರೆಯುತ್ತದೆ. ಸಮುದಾಯದ ಪ್ರಮುಖ ವ್ಯಕ್ತಿಗಳ ಸಂಪರ್ಕ ಹೆಚ್ಚಾಗುತ್ತದೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ತುಲಾ ರಾಶಿ*
ವ್ಯಾಪಾರ ವಹಿವಾಟುಗಳು ಎಂದಿನಂತೆ ನಡೆಯುತ್ತವೆ. ಕೈಗೆತ್ತಿಕೊಂಡ ಕೆಲಸಗಳು ನಿಧಾನಗತಿಯಲ್ಲಿ ಸಾಗುತ್ತವೆ. ಆಧ್ಯಾತ್ಮಿಕ ವಿಷಯಗಳತ್ತ ಗಮನ ಹರಿಸುತ್ತೀರಿ. ಉದ್ಯೋಗದಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ. ಹಣದ ವಿಷಯಗಳಲ್ಲಿ ಎಚ್ಚರಿಕೆ ಅಗತ್ಯ ಪ್ರಮುಖ ವಿಷಯಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಕುಟುಂಬ ಸದಸ್ಯರಿಂದ ಒತ್ತಡ ಹೆಚ್ಚಾಗುತ್ತದೆ.

*ವೃಶ್ಚಿಕ ರಾಶಿ*
ಉದ್ಯೋಗದಲ್ಲಿ ಗೊಂದಲ ಉಂಟಾಗುತ್ತದೆ. ಅನಗತ್ಯ ವಿಷಯಗಳಿಗೆ ಹಣ ವ್ಯಯವಾಗುತ್ತದೆ. ಹೊಸ ವ್ಯವಹಾರವನ್ನು ಪ್ರಾರಂಭಿಸಲು ಅಡೆತಡೆಗಳು ಉಂಟಾಗುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ. ಕುಟುಂಬದ ಸದಸ್ಯರು ನಿಮ್ಮ ಮಾತಿಗೆ ಒಪ್ಪುವುದಿಲ್ಲ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಮಸ್ಯೆಗಳಿರುತ್ತವೆ.

*ಧನುಸ್ಸು ರಾಶಿ*
ವ್ಯಾಪಾರಗಳು ನಿರೀಕ್ಷೆಗಳು ಈಡೇರುತ್ತವೆ. ಆತ್ಮೀಯರ ಆಗಮನವು ಸಂತೋಷವನ್ನು ತರುತ್ತದೆ. ಕೆಲಸದಲ್ಲಿ ಉತ್ಸಾಹದಾಯಕ ವಾತಾವರಣವಿರುತ್ತದೆ. ಸ್ಥಿರಾಸ್ತಿ ವಿವಾದಗಳನ್ನು ಪರಿಹರಿಸಲಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಪಾಲುದಾರರೊಂದಿಗೆ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ನಿರೀಕ್ಷಿತ ಆರ್ಥಿಕ ಪ್ರಗತಿ ಉಂಟಾಗುತ್ತದೆ.

*ಮಕರ ರಾಶಿ*
ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಕೈಗೆತ್ತಿಕೊಂಡ ವ್ಯವಹಾರಗಳಲ್ಲಿ ಕಾರ್ಯ ಸಿದ್ದತೆ ಉಂಟಾಗುತ್ತದೆ. ಬಾಲ್ಯದ ಗೆಳೆಯರೊಂದಿಗೆ ಭೋಜನ ಮನರಂಜನಾ ಕಾರ್ಯದಲ್ಲಿ ಭಾಗವಹಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಬೆಂಬಲ ದೊರೆಯುತ್ತದೆ. ಆತ್ಮೀಯರಿಂದ ನಿರೀಕ್ಷಿತ ಸಹಾಯ ದೊರೆಯುತ್ತದೆ. ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ.

*ಕುಂಭ ರಾಶಿ*
ವ್ಯಾಪಾರಗಳು ನಿರೀಕ್ಷಿತ ಮಟ್ಟದಲ್ಲಿ ಲಾಭದಾಯಕವಾಗುವುದಿಲ್ಲ. ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ವ್ಯರ್ಥ ಖರ್ಚು ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ನಿರಾಸೆ ಹೆಚ್ಚಾಗುತ್ತದೆ. ವಿವಾದಗಳಿಂದ ದೂರವಿರುವುದು ಉತ್ತಮ. ಕೌಟುಂಬಿಕ ವಾತಾವರಣ ಉದ್ವಿಗ್ನವಾಗಿರುತ್ತದೆ. ಆಪ್ತ ಸ್ನೇಹಿತರೊಂದಿಗೆ ಹಣದ ವಿಷಯದಲ್ಲಿ ಭಿನ್ನಾಭಿಪ್ರಾಯಗಳಿರುತ್ತವೆ.

*ಮೀನ ರಾಶಿ*
ಸಂಬಂಧಿಕರೊಂದಿಗೆ ವಿನಾಕಾರಣ ವಾದ ವಿವಾದಗಳು ಉಂಟಾಗುತ್ತವೆ. ಪ್ರಮುಖ ವಿಷಯಗಳಲ್ಲಿ ಗೊಂದಲ ಉಂಟಾಗುತ್ತದೆ. ಸಣ್ಣ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ವ್ಯಾಪಾರಗಳು ನಿಧಾನವಾಗಿರುತ್ತವೆ. ಉದ್ಯೋಗಗಳಲ್ಲಿ ಅನಿರೀಕ್ಷಿತ ಸಮಸ್ಯೆಗಳು ಉಂಟಾಗುತ್ತವೆ. ಹಠಾತ್ ಪ್ರಯಾಣದ ಸೂಚನೆಗಳಿವೆ. ಹೊಸ ಸಾಲಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ಹೆದ್ದಾರಿ ದಾಟುವಾಗ ಡಿಕ್ಕಿ ಹೊಡೆದ ಕಾರು ; ಗಾಳಿಯಲ್ಲಿ 10 ಅಡಿ ತೂರಿ ಹೋಗಿ ಬಿದ್ದ ಮಹಿಳೆ ; ಭಯಾನಕ ವಿಡಿಯೋ ವೈರಲ್.!

ಜನಸ್ಪಂದನ ನ್ಯೂಸ್, ಚಿತ್ರದುರ್ಗ : ಚತುಷ್ಪಥ ರಸ್ತೆ (four-lane road) ದಾಟಲು ಯತ್ನಿಸುತ್ತಿದ್ದ ಮಹಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಬಸಾಪುರ ಗೇಟ್ (Basapura Gate) ಬಳಿ ನಡೆದಿದೆ.

ಅಪಘಾತದ ಭೀಕರ ದೃಶ್ಯ CCTV ಯಲ್ಲಿ ಸೆರೆಯಾಗಿದ್ದು, ಸದ್ಯ ವೈರಲ್‌ ಆಗಿದೆ. ವೈರಲ್‌ (Viral) ಆಗಿರುವ ದೃಶ್ಯ ನೋಡುಗರು ಬೆಚ್ಚಿಬೀಳುವಂತಿದೆ.

ಇದನ್ನು ಓದಿ : ಕಂಡಕ್ಟರ್ ವಿರುದ್ಧ ಪೋಕ್ಸೋ Case ಹಿಂಪಡೆದ ಬಾಲಕಿಯ ಕುಟುಂಬಸ್ಥರು.!

ಈ ಭೀಕರ ಅಪಘಾತಕ್ಕೆ ಬಲಿಯಾದ ದುರ್ದೈವಿ ಮಹಿಳೆಯನ್ನು 48 ವರ್ಷದ ಅನಂತಮ್ಮ (Ananthamma) ಎಂದು ಗುರುತಿಸಲಾಗಿದೆ. ಚತುಷ್ಪಥ ರಸ್ತೆಯಲ್ಲಿ KSRTC ಬಸ್‌ ರಸ್ತೆ ದಾಟುವಾಗಿ ಈ ಅವಘಡ ಸಂಭವಿಸಿದೆ. ಮೃತ ಮಹಿಳೆ ಬಸ್‌ ಇಳಿದು ರಸ್ತೆ ದಾಟುವ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರೊಂದು (speeding car) ಮಹಿಳೆಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದೆ. ಈ ದೃಶ್ಯವನ್ನು ವಿಡಿಯೋದಲ್ಲಿ ನೋಡಬಹುದಾಗಿದೆ.

ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ಮಹಿಳೆಗೆ ಗುದ್ದಿದ ರಭಸಕ್ಕೆ ಗಾಳಿಯಲ್ಲಿ ತೇಲುತ್ತಾ (floating in the air) ಮೂರು ಪಲ್ಟಿ ಹೊಡೆದು ದೂರ ಹೋಗಿ ಬೀಳುವುದು CCTV ಯಲ್ಲಿ ಸೆರೆಯಾಗಿದೆ.

ಇದನ್ನು ಓದಿ : ನಾಲೆಗೆ ಹಾರಿ ಒಂದೇ family ಮೂವರ ಸಾ* ; ಕಾರಣ.?

ಕಾರು ಗುದ್ದಿದ ರಭಸಕ್ಕೆ ಸ್ಥಳದಿಂದ ಸುಮಾರು 10 ಅಡಿ ದೂರದಲ್ಲಿ ಬಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದೇ ಮಹಿಳೆಯ ಜೊತೆಗಿದ್ದ ಮೂವರು ಸುದೈವಶಾತ್‌ (fortunately) ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೃತ ಮಹಿಳೆ ಇನ್ನೊಬ್ಬ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿ ಮೂವರೊಂದಿಗೆ ಮೊದಲನೇ ಲೇನ್‌ (first lane to second lane) ನಂತರದ ವಿಭಜಕ ದಾಟಿ ಎರಡನೇ ಲೇನ್‌ಗ್ ಬರುತ್ತಿದಂತೆಯೇ ಈ ದುರ್ಘಟನೆ ನಡೆದಿದೆ.

ಇದನ್ನು ಓದಿ : ಸಿಸೇರಿಯನ್ ಬಳಿಕ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ Doctors.!

ಇನ್ನು ಮಹಿಳೆಗೆ ಡಿಕ್ಕಿ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ (fled) ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಭಯಾನಕ ವಿಡಿಯೋ ಇಲ್ಲಿದೆ :

ಕಂಡಕ್ಟರ್ ವಿರುದ್ಧ ಪೋಕ್ಸೋ Case ಹಿಂಪಡೆದ ಬಾಲಕಿಯ ಕುಟುಂಬಸ್ಥರು.!

ಬೆಳಗಾವಿ : KSRTC ಬಸ್ ಕಂಡಕ್ಟರ್ ವಿರುದ್ಧ ನೀಡಿರುವ ಪೋಕ್ಸೋ (POCSO) ದೂರನ್ನು ವಾಪಸ್​​ ಹಿಂಪಡೆದಿದ್ದೇವೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಹೇಳಿದ್ದಾರೆ.

ನಾವು ಕೂಡ ಕನ್ನಡಿಗರೇ, ಈ ವಿಚಾರದಲ್ಲಿ ಕನ್ನಡ- ಮರಾಠಿಗರ ನಡುವೆ ಜಗಳ ಆಗುತ್ತಿದೆ. ಕಂಡಕ್ಟರ್ ಮಹಾದೇವಪ್ಪ​ ಅವರ ಮೇಲೆ ನೀಡಿದ್ದ ದೂರನ್ನು ಹಿಂಪಡೆದಿದ್ದೇವೆ (We have withdrawn the complaint) ಎಂದು ಸಂತ್ರಸ್ತೆಯ ತಾಯಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇದನ್ನು ಓದಿ : ಸಿಸೇರಿಯನ್ ಬಳಿಕ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ Doctors.!

ನಮ್ಮ ಮಗಳು ಹಾಗೂ ಮಗ ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ ಬಸ್​ನಲ್ಲಿ ಟಿಕೆಟ್ ವಿಚಾರವಾಗಿ ಜಗಳವಾಗಿದೆ.

ಈ ವೇಳೆ ಕನ್ನಡ, ಮರಾಠಿಗರ ಗಲಾಟೆ ಅಂತ ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಇದರಿಂದ ಮಹಾರಾಷ್ಟ್ರ, ಕರ್ನಾಟಕದ ನಡುವೆ ಜಗಳ ಶುರುವಾಗಿದೆ. ಭಾಷೆ ಮರಾಠಿ ಆಗಿದ್ದರೂ, ನಾವು ಕನ್ನಡಿಗರೇ. ಇದರಿಂದ ನಮಗೂ ಬೇಸರವಾಗಿದೆ ಎಂದು ಸಂತ್ರಸ್ತೆಯ ತಾಯಿ ತಿಳಿಸಿದ್ದಾರೆ.

ಇದನ್ನು ಓದಿ : ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣ : ಕಾನೂನು ಕಾಲೇಜು ಉಪಪ್ರಾಂಶುಪಾಲರು ಸೇರಿ ಮೂವರ ಬಂಧನ̤!

ನಾವು ಪ್ರಕರಣ ವಾಪಸ್ ಪಡೆಯುತ್ತೇವೆ, ಇದನ್ನು ಇಲ್ಲಿಗೆ ನಿಲ್ಲಿಸಬೇಕು. ಸ್ವ ಇಚ್ಛೆಯಿಂದ ಕೇಸ್ ಹಿಂಪಡೆದಿದ್ದೇವೆ. ನಮ್ಮ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಅವರು ಹೇಳಿದ್ದಾರೆ.

Astrology : ಫೆಬ್ರುವರಿ 25ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜೋತಿಷ್ಯ : 2025 ಫೆಬ್ರುವರಿ 25ರ ಮಂಗಳವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ
ನೋಡಿ.

*ಮೇಷ ರಾಶಿ*
ಕೈಗೊಂಡ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ. ಸಮಾಜದ ಪ್ರಮುಖ ವ್ಯಕ್ತಿಗಳ ಪರಿಚಯ ಹೆಚ್ಚಾಗುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರೀಕ್ಷೆಗಳು ನಿಜವಾಗುತ್ತವೆ. ಆತ್ಮೀಯರಿಂದ ಶುಭ ಸುದ್ದಿ ಕೇಳುತ್ತೀರಿ. ಮೌಲ್ಯದ ವಸ್ತು ಮತ್ತು ವಾಹನಗಳನ್ನು ಖರೀದಿಸಲಾಗುತ್ತದೆ. ನಿರ್ಣಾಯಕ ಸಮಯದಲ್ಲಿ ಸ್ವಂತ ನಿರ್ಧಾರಗಳು ಕೂಡಿ ಬರುತ್ತವೆ.

*ವೃಷಭ ರಾಶಿ*
ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಮಸ್ಯೆಗಳಿರುತ್ತವೆ. ಹೊಸ ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ. ಹಠಾತ್ ಪ್ರಯಾಣದ ಸೂಚನೆಗಳಿವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಗೊಂದಲಮಯ ಸನ್ನಿವೇಶಗಳಿರುತ್ತವೆ. ಕೆಲವು ವ್ಯವಹಾರಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಕುಟುಂಬ ಸದಸ್ಯರೊಂದಿಗೆ ಚರ್ಚೆಗಳಿರುತ್ತವೆ.

*ಮಿಥುನ ರಾಶಿ*
ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಆಪ್ತ ಸ್ನೇಹಿತರಿಂದ ಧನಲಾಭದ ಸಲಹೆಗಳಿವೆ. ಸಂಬಂಧಿಕರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗಿನ ಸಮಸ್ಯೆಗಳು ಬಗೆಹರಿಯುತ್ತವೆ. ಕೈಗೆತ್ತಿಕೊಂಡ ಕಾರ್ಯಗಳು ನಿರೀಕ್ಷೆಯಂತೆ ನಡೆಯುತ್ತವೆ. ಹೊಸ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

*ಕಟಕ ರಾಶಿ*
ಉದ್ಯೋಗದಲ್ಲಿ ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ. ಸಹೋದರರೊಂದಿಗೆ ಸ್ಥಿರಾಸ್ತಿ ವಿವಾದಗಳಿರುತ್ತವೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ವ್ಯಾಪಾರಗಳು ನಿಧಾನವಾಗುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಮಸ್ಯೆಗಳಿರುತ್ತವೆ. ಬಂಧುಗಳೊಂದಿಗೆ ವಾದ ವಿವಾದಗಳು ಉಂಟಾಗುತ್ತವೆ.

*ಸಿಂಹ ರಾಶಿ*
ಮನೆಯಲ್ಲಿ ಶುಭ ಕಾರ್ಯಗಳು ನೆರವೇರುತ್ತವೆ. ಮನೆಯ ಹೊರಗೆ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತವೆ. ರಾಜಕೀಯ ಸಭೆ, ಸಮಾರಂಭಗಳಲ್ಲಿ ಭಾಗವಹಿಸುತ್ತೀರಿ. ಕೈಗೊಂಡ ವ್ಯವಹಾರಗಳಲ್ಲಿ ಯಶಸ್ವಿಯಾಗುತ್ತೀರಿ. ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಾಗುತ್ತದೆ. ವೃತ್ತಿಪರ ವ್ಯವಹಾರಗಳು ವಿಸ್ತಾರಗೊಳ್ಳುತ್ತವೆ. ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುತ್ತೀರಿ.

*ಕನ್ಯಾ ರಾಶಿ*
ಆತ್ಮೀಯ ಸ್ನೇಹಿತರೊಂದಿಗೆ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ಮಕ್ಕಳ ವಿವಾಹದ ಪ್ರಸ್ತಾಪವಿರುತ್ತದೆ. ಸಹೋದರರೊಂದಿಗೆ ಸಾಮರಸ್ಯ ಇರುತ್ತದೆ. ವ್ಯಾಪಾರಗಳಿಗೆ ಲಾಭ ದೊರೆಯುತ್ತದೆ. ಉದ್ಯೋಗದಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ದತೆ ಇರುತ್ತದೆ. ಸ್ಥಿರಾಸ್ತಿ ಖರೀದಿ ಪ್ರಯತ್ನಗಳು ಫಲ ನೀಡುತ್ತವೆ.

*ತುಲಾ ರಾಶಿ*
ದೈವಿಕ ದರ್ಶನ ಪಡೆಯುತ್ತೀರಿ. ಸಹೋದರರೊಂದಿಗಿನ ವಿವಾದಗಳು ಕಿರಿಕಿರಿಯುಂಟುಮಾಡುತ್ತವೆ. ದೀರ್ಘಾವಧಿ ಸಾಲದ ಒತ್ತಡ ಹೆಚ್ಚಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ವ್ಯಾಪಾರಸ್ಥರು ಸ್ವಲ್ಪ ಮಟ್ಟಿಗೆ ನಿರಾಶೆಗೊಳ್ಳುತ್ತಾರೆ.

*ವೃಶ್ಚಿಕ ರಾಶಿ*
ವೃತ್ತಿಪರ ವ್ಯವಹಾರದಲ್ಲಿ ನಿರ್ಧಾರಗಳು ಇದ್ದಕ್ಕಿದ್ದಂತೆ ಬದಲಾಗುತ್ತವೆ. ಪ್ರಮುಖ ವ್ಯವಹಾರಗಳು ನಿಧಾನವಾಗುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಶ್ರಮಕ್ಕೆ ತಕ್ಕ ಫಲ ದೊರೆಯುವುದಿಲ್ಲ. ದೈವಿಕ ಸೇವೆಗಳಲ್ಲಿ ಭಾಗವಹಿಸುತ್ತೀರಿ. ಉದ್ಯೋಗದಲ್ಲಿನ ಸಮಸ್ಯೆಗಳು ಬಗೆಹರಿಯುತ್ತವೆ. ನಿರುದ್ಯೋಗ ಪ್ರಯತ್ನಗಳು ನಿಧಾನವಾಗುತ್ತವೆ.

*ಧನುಸ್ಸು ರಾಶಿ*
ಹಳೆಯ ಸಮಸ್ಯೆಗಳು ಬಗೆಹರಿಯಲಿವೆ. ಸಂಬಂಧಿಕರಿಂದ ಶುಭ ಆಹ್ವಾನಗಳು ಬರಲಿವೆ. ಆತ್ಮೀಯ ಸ್ನೇಹಿತರೊಂದಿಗೆ ಅನಿರೀಕ್ಷಿತ ಸಂಭಾಷಣೆಗಳಿವೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಗೌರವಕ್ಕೆ ಕೊರತೆ ಇರುವುದಿಲ್ಲ. ವ್ಯಾಪಾರ ಮತ್ತು ಉದ್ಯೋಗಗಳು ತೃಪ್ತಿಕರವಾಗಿ ಸಾಗುತ್ತವೆ.

*ಮಕರ ರಾಶಿ*
ಆತ್ಮೀಯರಿಂದ ಶುಭ ಸುದ್ದಿ ದೊರೆಯುತ್ತದೆ. ಹೊಸ ವಾಹನ ಖರೀದಿಸಲಾಗುತ್ತದೆ. ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಪರಿಚಯ ವಿಸ್ತಾರಗೊಳ್ಳುತ್ತದೆ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಸಂದರ್ಶನಗಳು ದೊರೆಯುತ್ತವೆ.

*ಕುಂಭ ರಾಶಿ*
ಉದ್ಯೋಗದ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ಕುಟುಂಬ ಸದಸ್ಯರೊಂದಿಗೆ ದೇವಸ್ಥಾನಗಳಿಗೆ ಭೇಟಿ ನೀಡುತ್ತೀರಿ. ಕೆಲವು ವ್ಯವಹಾರಗಳು ಒತ್ತಡದಿಂದ ಪೂರ್ಣಗೊಳ್ಳುವುದಿಲ್ಲ. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ದೂರ ಪ್ರಯಾಣದ ಸೂಚನೆಗಳಿವೆ. ವ್ಯಾಪಾರಗಳು ಸೀಮಿತವಾಗಿರುತ್ತವೆ. ಹಳೆ ಸಾಲಗಳು ವಸೂಲಿಯಾಗುತ್ತದೆ.

*ಮೀನ ರಾಶಿ*
ಹಠಾತ್ ಪ್ರಯಾಣದ ಸೂಚನೆಗಳಿವೆ. ದೀರ್ಘಾವಧಿಯ ಸಾಲದ ಒತ್ತಡ ಹೆಚ್ಚಾಗುತ್ತದೆ. ಪ್ರಮುಖ ಕೆಲಸಗಳು ಸಣ್ಣ ಆರೋಗ್ಯ ಸಮಸ್ಯೆಗಳು ನೋವುಂಟುಮಾಡುತ್ತವೆ. ವ್ಯಾಪಾರದಲ್ಲಿ ಅಲ್ಪ ಲಾಭ ದೊರೆಯುತ್ತದೆ. ವೃತ್ತಿ ಉದ್ಯೋಗಗಳು ನಿಧಾನವಾಗಿ ಸಾಗುತ್ತವೆ. ಕೌಟುಂಬಿಕ ವ್ಯವಹಾರಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಹಠಾತ್ ಪ್ರಯಾಣ ಸೂಚನೆಗಳಿವೆ. ಮನೆಯ ಹೊರಗೆ ಕಿರಿಕಿರಿ ಹೆಚ್ಚಾಗುತ್ತದೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ನಾಲೆಗೆ ಹಾರಿ ಒಂದೇ family ಮೂವರ ಸಾ* ; ಕಾರಣ.?

0

ಮಂಡ್ಯ : ಮಂಡ್ಯದ (Mandya) ಯಲಿಯೂರು ಸಮೀಪ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸಾವಿಗೀಡಾದವರು ಶ್ರೀರಂಗಪಟ್ಟಣದ ಗಂಜಾಂ ನಿವಾಸಿಗಳಾದ (Residents of Ganjam, Srirangapatna) ಮಾಸ್ತಪ್ಪ, ಅವರ ಪತ್ನಿ ರತ್ನಮ್ಮ ಹಾಗೂ ಮಗಳು ಲಕ್ಷ್ಮೀ ಎಂದು ತಿಳಿದು ಬಂದಿದೆ. ಚಂದಗಾಲು ಬಳಿ ನಾಲೆ ಏರಿ ಮೇಲೆ ಆಟೋ ನಿಲ್ಲಿಸಿ ಮೊದಲು ದಂಪತಿ ಮತ್ತು ಮಗಳು ವಿಷ (poison) ಸೇವಿಸಿದ್ದಾರೆ. ಬಳಿಕ ವಿ. ಸಿ. ನಾಲೆಗೆ ಹಾರಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನು ಓದಿ : ಸಿಸೇರಿಯನ್ ಬಳಿಕ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ Doctors.!

ಮಾಸ್ತಪ್ಪ ಆಟೋ ಡ್ರೈವರ್ ಆಗಿದ್ದು, ಸುಮಾರು 3 ಲಕ್ಷ ರೂಪಾಯಿ ಕೈಸಾಲ (3 lack loan) ಮಾಡಿಕೊಂಡಿದ್ದರು. ಸಾಲ ಕೊಟ್ಟವರು ಮನೆ ಬಳಿ ಬಂದು ಗಲಾಟೆ ಮಾಡಿದ್ದಕ್ಕೆ ನೊಂದು, ಕುಟುಂಬದೊಂದಿಗೆ ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಾಸ್ತಪ್ಪ 3 ಲಕ್ಷ ರೂ. ಕೈಸಾಲ ಸೇರಿದಂತೆ ಸುಮಾರು 12 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದು, ಸಾಲಗಾರರ ಕಾಟದಿಂದ (creditors) ಮನೆ ಮಾರಲು ಮುಂದಾಗಿದ್ದರು ಎನ್ನಲಾಗಿದೆ.

ಇದನ್ನು ಓದಿ : Video : ಮೇಲಿನಿಂದ ಬೀಳುತ್ತಿದ್ದ ನಾಯಿಯನ್ನು ರಕ್ಷಿಸಿದ ಮಹಿಳೆ ; ಶಹಬ್ಬಾಸ್ ಎಂದ ನೆಟ್ಟಿಗರು.!

ಘಟನೆ ನಡೆದ ಸ್ಥಳಕ್ಕೆ ಎಸ್​​ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಸೇರಿಯನ್ ಬಳಿಕ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ Doctors.!

0

ದಕ್ಷಿಣ ಕನ್ನಡ : ಕೆಲ ವೈದ್ಯರು ಆಪರೇಷನ್ ವೇಳೆ ಯಸವುದೋ ಯೋಚನೆಯಲ್ಲಿ ಬಟ್ಟೆ, ಕತ್ತರಿಯನ್ನು ಅಲ್ಲೇ ಬಿಟ್ಟು ಜೀವಕ್ಕೆ ಕುತ್ತು ತಂದಿರುವ ಘಟನೆಗಳು ನಡೆದಿದ್ದು, ಇದೀಗ ರಾಜ್ಯದಲ್ಲಿ ಮೂರನೇ ಪ್ರಕರಣ ಬೆಳಕಿಗೆ ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಗಾಗಿ 2024ರ ನ. 27 ರಂದು ಮಹಿಳೆಯೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾರ್ಮಲ್ ಹೆರಿಗೆಯಾಗದ ಹಿನ್ನಲೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು.

ಇದನ್ನು ಓದಿ : Video : ಮೇಲಿನಿಂದ ಬೀಳುತ್ತಿದ್ದ ನಾಯಿಯನ್ನು ರಕ್ಷಿಸಿದ ಮಹಿಳೆ ; ಶಹಬ್ಬಾಸ್ ಎಂದ ನೆಟ್ಟಿಗರು.!

ಆರ್ಯಾಪು ಗ್ರಾಮದ ಬಂಗಾರಡ್ಕದ ಶರಣ್ಯ ಲಕ್ಷ್ಮಿ ಎಂಬುವವರಿಗೆ ನಾರ್ಮಲ್ ಹೆರಿಗೆಯಾಗದ ಹಿನ್ನಲೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು.

ಬಳಿಕ ಡಿ. 2 ರಂದು ಶರಣ್ಯ ಲಕ್ಷ್ಮಿ ಯವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಮನೆಗೆ ಬಂದ ಕೆಲದಿನಗಳ ಬಳಿಕ ವಿಪರೀತ ಜ್ವರ ಬಂದ ಹಿನ್ನಲೆ ಆಪರೇಷನ್ ಮಾಡಿದ ವೈದ್ಯರಿಗೆ ಕಾಲ್ ಮಾಡಿ ತಿಳಿಸಿದ್ದಾರೆ. ಅದಕ್ಕೆ ಆ ವೈದ್ಯ ಜ್ವರದ ಔಷಧಿ ನೀಡುವಂತೆ ಸೂಚಿಸಿದರು.

ಇದನ್ನು ಓದಿ : ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣ : ಕಾನೂನು ಕಾಲೇಜು ಉಪಪ್ರಾಂಶುಪಾಲರು ಸೇರಿ ಮೂವರ ಬಂಧನ̤!

ಆದರೂ ಕೂಡ ಜ್ವರದಿಂದ ಎದ್ದು ನಿಲ್ಲಲು ಆಗದ ಸ್ಥಿತಿ ಉಂಟಾದ ಹಿನ್ನಲೆ ಮಂಗಳೂರಿನ ವೈದ್ಯರನ್ನು ಸಂಪರ್ಕಿಸಿದರು, ಈ ವೇಳೆ ವೈದ್ಯರು ಸ್ಕ್ಯಾನಿಂಗ್ ಮಾಡಿಸಲು ಸೂಚಿಸಿದ್ದಾರೆ ಎನ್ನಲಾಗಿದೆ.

ಅಂತೆಯೇ ಸಿಟಿ ಸ್ಕ್ಯಾನ್ ಮಾಡಿಸಿದಾಗ ಹೊಟ್ಟೆಯೊಳಗಡೆ ಸರ್ಜಿಕಲ್ ಬಟ್ಟೆ ಬಿಟ್ಟಿರುವುದು ಗೊತ್ತಾಗಿದೆ. ಕೂಡಲೇ ಶಸ್ತ್ರ ಚಿಕಿತ್ಸೆ ನಡೆಸಿ ಹೊಟ್ಟೆಯೊಳಗೆ ಇದ್ದ ಸರ್ಜಿಕಲ್ ಬಟ್ಟೆಯನ್ನು ಹೊರಗೆ ತೆಗೆಯಲಾಗಿದೆ.

ಇದನ್ನು ಓದಿ : ಸಮಾಜದ ಉನ್ನತಿ – ಪ್ರಗತಿಗೆ ಸೇವೆ ಸಲ್ಲಿಸಿದ್ದ ವ್ಯಕ್ತಿಯೇ ಸ್ವಾಮಿ ವಿವೇಕಾನಂದರು : ಶಾಸಕ ಬಾಲಚಂದ್ರ ಜಾರಕಿಹೊಳಿ.

ಸದ್ಯ ಈ ಘಟನೆಗೆ ಸಂಬಂಧಪಟ್ಟಂತೆ ಮಹಿಳೆಯ ಪತಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

Astrology : ಫೆಬ್ರುವರಿ 24ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜೋತಿಷ್ಯ : 2025 ಫೆಬ್ರುವರಿ 24ರ ಸೋಮವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ
ನೋಡಿ.

*ಮೇಷ ರಾಶಿ*
ಆದಾಯ ಮಿತಿಯಲ್ಲಿರುತ್ತದೆ. ವಿವಾದಗಳಿಂದ ದೂರವಿರುವುದು ಉತ್ತಮ. ದೈವಿಕ ಚಟುವಟಿಕೆಗಳ ಮೇಲೆ ಕೇಂದ್ರೀಕರಿಸುತ್ತೀರಿ. ವ್ಯರ್ಥ ಖರ್ಚು ಹೆಚ್ಚಾಗುತ್ತದೆ ಮತ್ತು ನಿರುದ್ಯೋಗವು ಪ್ರಯತ್ನಗಳನ್ನು ನಿರುತ್ಸಾಹಗೊಳಿಸುತ್ತದೆ. ಕುಟುಂಬ ಸದಸ್ಯರ ಆರೋಗ್ಯ ಸಮಸ್ಯೆಗಳು ಸ್ವಲ್ಪ ಬಾಧಿಸುತ್ತವೆ. ದೂರದ ಪ್ರಯಾಣವನ್ನು ಮುಂದೂಡಲಾಗುತ್ತದೆ.

*ವೃಷಭ ರಾಶಿ*
ಸಹೋದರರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ಹೊಸ ವಾಹನ ಖರೀದಿ ನಡೆಯುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಪ್ರಗತಿ ಕಂಡುಬರುತ್ತದೆ. ವ್ಯಾಪಾರಗಳು ಅಭಿವೃದ್ಧಿ ಹೊಂದುತ್ತವೆ. ಉದ್ಯೋಗಿಗಳಿಗೆ ಅನುಕೂಲಕರ ವಾತಾವರಣವಿರುತ್ತದೆ. ಸಮಾಜದಲ್ಲಿ ಅಪಾರ ಗೌರವ ದೊರೆಯುತ್ತದೆ.

*ಮಿಥುನ ರಾಶಿ*
ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ನಿರುದ್ಯೋಗಿಗಳ ಕಷ್ಟಕ್ಕೆ ಫಲ ಸಿಗುತ್ತದೆ. ಹೊಸ ಅವಕಾಶಗಳನ್ನು ಪಡೆಯುತ್ತೀರಿ. ವ್ಯಾಪಾರ ವಿಸ್ತರಣೆಗಾಗಿ ಹೂಡಿಕೆ ಮಾಡಲಾಗುತ್ತದೆ. ಉದ್ಯೋಗಗಳು ಉತ್ಸಾಹದಾಯವಾಗಿರುತ್ತವೆ. ಸ್ನೇಹಿತರಿಂದ ಹೊಸ ವಿಷಯಗಳನ್ನು ಸಂಗ್ರಹಿಸುತ್ತೀರಿ. ಸ್ಥಿರಾಸ್ತಿ ವಿವಾದಗಳನ್ನು ಪರಿಹರಿಸಲಾಗುತ್ತದೆ.

*ಕರ್ಕ ರಾಶಿ*
ಕೆಲವು ವಿಚಾರಗಳಲ್ಲಿ ಆಲೋಚನೆಗಳು ಕೂಡಿ ಬರುವುದಿಲ್ಲ. ಬಾಲ್ಯದ ಸ್ನೇಹಿತರ ಜೊತೆ ವಿನಾಕಾರಣ ವಿವಾದದ ಸೂಚನೆಗಳಿವೆ. ಬಂಧು ಮಿತ್ರರಿಂದ ಭಿನ್ನಭಿಪ್ರಾಯಗಳಿರುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರಾಶೆ ಉಂಟಾಗುತ್ತವೆ, ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ.

*ಸಿಂಹ ರಾಶಿ*
ಉದ್ಯೋಗಗಳು ನಿರೀಕ್ಷಿತ ಮಟ್ಟದಲ್ಲಿ ಇರುವುದಿಲ್ಲ. ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ದೂರದ ಪ್ರಯಾಣದ ಸೂಚನೆಗಳಿವೆ. ವ್ಯಾಪಾರ ವ್ಯವಹಾರಗಳು ನಿಧಾನವಾಗುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ಹಣಕಾಸಿನ ವ್ಯವಹಾರಗಳು ಸೀಮಿತವಾಗಿರುತ್ತದೆ.

*ಕನ್ಯಾ ರಾಶಿ*
ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಹೂಡಿಕೆಗಳು ದೊರೆಯುತ್ತವೆ. ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲದಿಂದ ಬಡ್ತಿ ದೊರೆಯುತ್ತದೆ. ಹೊಸ ಜನರ ಪರಿಚಯವು ಭವಿಷ್ಯಕ್ಕೆ ಉಪಯುಕ್ತವಾಗಿರುತ್ತದೆ. ಹಣಕಾಸಿನ ವ್ಯವಹಾರಗಳು ಸುಗಮವಾಗಿ ಸಾಗುತ್ತದೆ. ಸಮಾಜದಲ್ಲಿ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ. ಮಕ್ಕಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ.

*ತುಲಾ ರಾಶಿ*
ಬಾಲ್ಯದ ಗೆಳೆಯರೊಂದಿಗೆ ಸೇವಾ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ಹಳೆ ಸಾಲಗಳನ್ನು ವಸೂಲಿ ಮಾಡಲಾಗುತ್ತದೆ. ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಯಿಂದ ನೀವು ಅಧಿಕಾರಿಗಳಿಂದ ಮೆಚ್ಚುಗೆಯನ್ನು ಪಡೆಯುತ್ತೀರಿ. ಮನೆಯ ಹೊರಗೆ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತವೆ. ವ್ಯಾಪಾರಗಳು ವಿಸ್ತರಣೆಯಾಗುತ್ತವೆ. ಸಹೋದರರೊಂದಿಗೆ ಸ್ಥಿರಾಸ್ತಿ ವಿವಾದಗಳು ಬಗೆಹರಿಯುತ್ತವೆ. ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ.

*ವೃಶ್ಚಿಕ ರಾಶಿ*
ಬಂಧು ಮಿತ್ರರೊಂದಿಗೆ ಒಂದು ವ್ಯವಹಾರದಲ್ಲಿ ವಿವಾದಗಳು ಉಂಟಾಗುತ್ತವೆ. ಕೈಗೊಂಡ ಕೆಲಸಗಳು ಮಧ್ಯದಲ್ಲಿ ನಿಲ್ಲುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳು ಸುಗಮವಾಗಿ ಸಾಗುತ್ತವೆ. ಮನೆಯ ವಾತಾವರಣ ಕಿರಿಕಿರಿಯುಂಟುಮಾಡುತ್ತದೆ. ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಲಾಗುತ್ತದೆ. ಆರ್ಥಿಕವಾಗಿ ಸ್ವಲ್ಪ ಗೊಂದಲವಿರುತ್ತದೆ. ದೂರದ ಪ್ರಯಾಣವನ್ನು ಆದಷ್ಟು ಮುಂದೂಡುವುದು ಉತ್ತಮ.

*ಧನು ರಾಶಿ*
ಇತರರ ವಿಚಾರದಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ. ಮಕ್ಕಳ ಶೈಕ್ಷಣಿಕ ಉದ್ಯೋಗ ಪ್ರಯತ್ನಗಳು ನಿಧಾನವಾಗುತ್ತದೆ. ಕುಟುಂಬದ ಸದಸ್ಯರು ನಿಮ್ಮ ಮಾತಿಗೆ ಒಪ್ಪುವುದಿಲ್ಲ. ವೃತ್ತಿಪರ ವ್ಯವಹಾರದಲ್ಲಿ ಪ್ರಯತ್ನವನ್ನು ಹೊರತುಪಡಿಸಿ ಯಾವುದೇ ಫಲಿತಾಂಶ ಇರುವುದಿಲ್ಲ. ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ದೂರದ ಪ್ರಯಾಣದ ಸೂಚನೆಗಳಿವೆ.

*ಮಕರ ರಾಶಿ*
ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ. ಕೆಲವು ವ್ಯವಹಾರಗಳಲ್ಲಿ ಸ್ವಂತ ನಿರ್ಧಾರಗಳೊಂದಿಗೆ ಮುಂದುವರಿಯುವುದು ಉತ್ತಮ. ಆತ್ಮೀಯರಿಂದ ದೊರೆಯುವ ಶುಭ ಸುದ್ದಿ ಸಂತೋಷವನ್ನು ತರುತ್ತದೆ. ಹೊಸ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುತ್ತದೆ ಮತ್ತು ವ್ಯವಹಾರಗಳು ಲಾಭದಾಯಕವಾಗಿರುತ್ತವೆ.

*ಕುಂಭ ರಾಶಿ*
ಆರೋಗ್ಯದ ವಿಚಾರದಲ್ಲಿ ಅಜಾಗರೂಕತೆ ಒಳ್ಳೆಯದಲ್ಲ. ಪ್ರಮುಖ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗಿಗಳಿಗೆ ಅಧಿಕಾರಿಗಳೊಂದಿಗೆ ಸಮಸ್ಯೆಗಳಿರುತ್ತವೆ. ಹಣಕಾಸಿನ ವಿಷಯಗಳಲ್ಲಿ ಇತರರಿಗೆ ಮಾತು ನೀಡುವುದು ಒಳ್ಳೆಯದಲ್ಲ, ನಿರ್ಧಾರಗಳಲ್ಲಿನ ಹಠಾತ್ ಬದಲಾವಣೆಗಳಿಂದಾಗಿ ವೃತ್ತಿಪರ ವ್ಯವಹಾರಗಳು ಅನಿವಾರ್ಯವಾಗಿ ನಷ್ಟವನ್ನುಂಟು ಮಾಡುತ್ತವೆ.

*ಮೀನ ರಾಶಿ*
ವ್ಯಾಪಾರ-ವ್ಯವಹಾರಗಳು ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತವೆ. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಒಂದು ಸುದ್ದಿ ಸಮಾಧಾನ ತರುತ್ತದೆ. ದೂರದ ಸಂಬಂಧಿಕರಿಂದ ಅಪರೂಪದ ಆಹ್ವಾನಗಳು, ಬರುತ್ತವೆ.
ಮನೆಯಲ್ಲಿ ಶುಭ ಕಾರ್ಯಗಳ ನಿರ್ವಹಣೆಯ ಕುರಿತು ಚರ್ಚೆಗಳು ನಡೆಯುತ್ತವೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Video : ಮೇಲಿನಿಂದ ಬೀಳುತ್ತಿದ್ದ ನಾಯಿಯನ್ನು ರಕ್ಷಿಸಿದ ಮಹಿಳೆ ; ಶಹಬ್ಬಾಸ್ ಎಂದ ನೆಟ್ಟಿಗರು.!

ಡೆಸ್ಕ್ : ನಾಯಿಗಳ ಕುರಿತಾದ ಮುದ್ದು ಮುದ್ದಾದ ವಿಡಿಯೋಗಳು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ (social media) ವೈರಲ್ ಆಗುತ್ತಿರುತ್ತವೆ.

ಆದರೆ ಇಲ್ಲೊಂದು ನಾಯಿ (dog video) ಸುಮ್ಮನೆ ತನ್ನ ಪಾಡಿಗೆ ಮಹಡಿಯ ಮೇಲೇರಿ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದೆ. ಬ್ರೆಜಿಲ್ ನದ್ದು ಎನ್ನಲಾದ ನಾಯಿಯ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.

ಇದನ್ನು ಓದಿ : ಕರ್ನಾಟಕದ ಬಸ್‌ಗಳಿಗೆ ಭಗವಾ ಧ್ವಜ ಕಟ್ಟಿ,‌ ಕರಿ ಮಸಿ ಬಳಿದ ಪುಂಡರು.!

ಕಟ್ಟಡದ ಮೇಲೆ ನಾಯಿ ನೇತಾಡುತ್ತಿರುವುದನ್ನು (Hanging) ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಬಹುದು. ಆ ಸಂದರ್ಭ ನಾಯಿಗೆ ತುಂಬಾ ಭಯವಾಗಿ ಅದು ಕಿರುಚುತ್ತಿದೆ.

ಆದರೆ ಆ ವೇಳೆ ಒಬ್ಬ ಮಹಿಳೆ ನಾಯಿ ನೇತಾಡುತ್ತಿರುವ ಕಿಟಕಿಯ ಸ್ವಲ್ಪ ಕೆಳಗೆ ಕಿಟಕಿಯ ಬಳಿ ನಿಂತು ಅದರ ಜೀವ ಉಳಿಸಲು ರಟ್ಟಿನ ಪೆಟ್ಟಿಗೆಯನ್ನು (A cardboard box) ಹಿಡಿದಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಇದನ್ನು ಓದಿ : ಭೀಕರ ರಸ್ತೆ ಅ*ಘಾತ : ಕುಂಭಮೇಳಕ್ಕೆ ಹೋಗಿದ್ದ ಕರ್ನಾಟಕ ಮೂಲದ 6 ಜನರ ಸಾ*.!

ನಾಯಿಯು ತಕ್ಷಣ ಆ ಮಹಿಳೆ ಹಿಡಿದುಕೊಂಡಿದ್ದ ರಟ್ಟಿನೊಳಗೆ ಬಿದ್ದಿದೆ. ಬಳಿಕ ಆ ಮಹಿಳೆ ಆ ನಾಯಿಯನ್ನು ತನ್ನ ಮನೆಯೊಳಗೆ ಕರೆದೊಯ್ದಿದ್ದಾಳೆ.

ಇಲ್ಲಿಯವರೆಗೆ ಈ ವಿಡಿಯೋವನ್ನು 1 ಲಕ್ಷ 16 ಸಾವಿರಕ್ಕೂ ಅಧಿಕ ಜನರು ವೀಕ್ಷಿಸಿದ್ದು, ಹಲವು ಕಮೆಂಟ್ ಗಳು ಬಂದಿವೆ. ನಿಮ್ಮ ಪ್ರಯತ್ನಕ್ಕೆ ಶಹಬ್ಬಾಸ್​ ಹೇಳಲೇಬೇಕು, ಆದರೆ ಆ ನಾಯಿ ಅಲ್ಲಿಗೆ ಹೇಗೆ ತಲುಪಿತು? ಎಂಬುದು ಗೊತ್ತಾಗಲಿಲ್ಲ ಎಂದು ಕಮೆಂಟ್ ಮಾಡಿದ್ದಾರೆ.

Astrology : ಫೆಬ್ರುವರಿ 23ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜೋತಿಷ್ಯ : 2025 ಫೆಬ್ರುವರಿ 23ರ ಭಾನುವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ
ನೋಡಿ.

*ಮೇಷ ರಾಶಿ*
ಅನಿರೀಕ್ಷಿತ ವಿವಾದಗಳು ಉಂಟಾಗುತ್ತದೆ. ಪ್ರಮುಖ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ವೃತ್ತಿಪರ ವ್ಯವಹಾರದಲ್ಲಿ ಪ್ರಯತ್ನವನ್ನು ಹೊರತುಪಡಿಸಿ ಯಾವುದೇ ಫಲಿತಾಂಶ ದೊರೆಯುವುದಿಲ್ಲ. ವ್ಯಾಪಾರ ಮತ್ತು ಉದ್ಯೋಗಗಳು ನಿಧಾನವಾಗುತ್ತವೆ. ವ್ಯರ್ಥ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ನೇತ್ರ, ಉದರ ಸಂಬಂಧಿ ಸಮಸ್ಯೆಗಳು ನೋವುಂಟು ಮಾಡುತ್ತವೆ.

*ವೃಷಭ ರಾಶಿ*
ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಸಮಾಜದಲ್ಲಿ ಪ್ರಸಿದ್ಧ ವ್ಯಕ್ತಿಗಳ ಜನಪ್ರಿಯತೆ ಹೆಚ್ಚಾಗುತ್ತದೆ. ಸಮಾಜದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ಕೈಗೊಂಡ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ. ಹೊಸ ವಾಹನ ಖರೀದಿಸಲಾಗುತ್ತದೆ. ಉದ್ಯೋಗಗಳಲ್ಲಿ ಪ್ರಗತಿ ಕಂಡುಬರುತ್ತದೆ. ಬಾಲ್ಯದ ಗೆಳೆಯರ ಭೇಟಿ ಸಂತಸ ತರುತ್ತದೆ.

*ಮಿಥುನ ರಾಶಿ*
ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳಿಂದ ಒತ್ತಡ ಹೆಚ್ಚಾಗುತ್ತದೆ. ಕೆಲವು ಕಾರ್ಯಗಳು ಮದ್ಯದಲ್ಲಿ ಮುಂದೂಡಲ್ಪಡುತ್ತವೆ. ಹಠಾತ್ ಪ್ರಯಾಣದ ಸೂಚನೆಗಳಿವೆ. ಆರೋಗ್ಯ ಸಮಸ್ಯೆಗಳು ಸ್ವಲ್ಪ ಕಿರಿಕಿರಿ ಉಂಟಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಸಂಬಂಧಿಕರೊಂದಿಗೆ ಕೆಲವು ವ್ಯವಹಾರಗಳಲ್ಲಿ ಭಿನ್ನಾಭಿಪ್ರಾಯಗಳಿರುತ್ತವೆ.

*ಕಟಕ ರಾಶಿ*
ಆತ್ಮೀಯರಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ಆರ್ಥಿಕ ಪರಿಸ್ಥಿತಿಗಳು ಸ್ವಲ್ಪ ಉತ್ತಮವಾಗಿರುತ್ತದೆ. ಪ್ರಯಾಣದಲ್ಲಿ ಹೊಸ ವ್ಯಕ್ತಿಗಳನ್ನು ಭೇಟಿ ಮಾಡುತ್ತೀರಿ. ಕೈಗೊಂಡ ಕೆಲಸದಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹ ದೊರೆಯುತ್ತದೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಸಿಂಹ ರಾಶಿ*
ಸಮಾಜದಲ್ಲಿ ಗೌರವಕ್ಕೆ ಕೊರತೆ ಇರುವುದಿಲ್ಲ. ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಾಗುತ್ತದೆ. ಮನೆಯ ವಾತವರಣ ಅನುಕೂಲಕರವಾಗಿರುತ್ತದೆ ಮತ್ತು ಹೊಸ ಪರಿಚಯಗಳು ಲಾಭದಾಯಕವಾಗುತ್ತವೆ. ಬಾಲ್ಯದ ಗೆಳೆಯರೊಂದಿಗೆ ಭೋಜನ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರದ ಉದ್ಯೋಗಗಳು ತೃಪ್ತಿಕರವಾಗಿ ನಡೆಯುತ್ತವೆ.

*ಕನ್ಯಾ ರಾಶಿ*
ಹಠಾತ್ ಪ್ರಯಾಣದ ಸೂಚನೆಗಳಿವೆ.ಆತ್ಮೀಯರೊಂದಿಗೆ ಕೆಲವು ವ್ಯವಹಾರಗಳಲ್ಲಿ ಭಿನ್ನಾಭಿಪ್ರಾಯಇರುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ಮನೆ ನಿರ್ಮಾಣ ವಿಷಯದಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಸಣ್ಣ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಉದ್ಯೋಗಗಳು ಸಾಮಾನ್ಯವಾಗಿ ಸಾಗುತ್ತವೆ. ಹಣಕಾಸಿನ ತೊಂದರೆಯಿಂದಾಗಿ ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ.

*ತುಲಾ ರಾಶಿ*
ಸಂಬಂಧಿಕರೊಂದಿಗೆ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತೀರಿ. ಕೌಟುಂಬಿಕ ಸಮಸ್ಯೆಗಳು ಸ್ವಲ್ಪ ಕಿರಿಕಿರಿಯನ್ನು ಉಂಟುಮಾಡುತ್ತವೆ. ಪ್ರಮುಖ ವ್ಯವಹಾರಗಳಲ್ಲಿ ವಿಳಂಬ ಉಂಟಾಗುತ್ತವೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ವ್ಯಾಪಾರಗಳು ಸ್ವಲ್ಪ ನಿಧಾನವಾಗಿರುತ್ತವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗುತ್ತದೆ. ವ್ಯರ್ಥ ಪ್ರಯಾಣಗಳನ್ನು ಮಾಡಬೇಕಾಗುತ್ತದೆ.

*ವೃಶ್ಚಿಕ ರಾಶಿ*
ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ಕೈಗೆತ್ತಿಕೊಂಡ ಕಾರ್ಯಗಳು ಸುಸೂತ್ರವಾಗಿ ಪೂರ್ಣಗೊಳ್ಳುತ್ತವೆ. ನಿರುದ್ಯೋಗಿಗಳು ಶುಭ ಸುದ್ದಿಯನ್ನು ಪಡೆಯುತ್ತಾರೆ, ಉದ್ಯೋಗಗಳಲ್ಲಿ ಸ್ಥಾನಗಳು ಹೆಚ್ಚಾಗುತ್ತವೆ. ಹೊಸ ಮನೆಗಳ ನಿರ್ಮಾಣದ ಪ್ರಯತ್ನಗಳು ವೇಗಗೊಳ್ಳುತ್ತವೆ. ಆತ್ಮೀಯರ ಆಗಮನವು ಸಂತೋಷವನ್ನು ತರುತ್ತದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ.

*ಧನುಸ್ಸು ರಾಶಿ*
ಕೈಗೆತ್ತಿಕೊಂಡ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ಹೊಸ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ದೂರದ ಬಂಧುಗಳ ಭೇಟಿ ಸಂತಸ ತರುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆ ಯಶಸ್ವಿಯಾಗುತ್ತದೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ. ಹೊಸ ವ್ಯವಹಾರಗಳಿಗೆ ಹೂಡಿಕೆಗಳು ಬರುತ್ತವೆ.

*ಮಕರ ರಾಶಿ*
ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ವೃತ್ತಿಪರ ವ್ಯವಹಾರಗಳು ಸ್ವಲ್ಪ ನಿಧಾನವಾಗುತ್ತವೆ. ಉದ್ಯೋಗದಲ್ಲಿ ಅನಿರೀಕ್ಷಿತ ತೊಂದರೆಗಳು ಎದುರಾಗುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಮನೆಯ ಹೊರಗೆ ಜವಾಬ್ದಾರಿಗಳು ಹೆಚ್ಚಾಗುತ್ತವೆ.

*ಕುಂಭ ರಾಶಿ*
ವೃತ್ತಿಪರ ವ್ಯವಹಾರಗಳು ನಿರುತ್ಸಾಹ ಗೊಳಿಸುತ್ತವೆ. ಹಣಕಾಸಿನ ವ್ಯವಹಾರಗಳು ನಿರುತ್ಸಾಹ ಗೊಳಿಸುತ್ತವೆ. ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಿ. ಹೆಚ್ಚುವರಿ ಹೊಣೆಗಾರಿಕೆಯಿಂದ ಉದ್ಯೋಗಿಗಳಿಗೆ ಸಮರ್ಪಕ ವಿಶ್ರಾಂತಿ ಸಿಗುವುದಿಲ್ಲ. ಪ್ರಮುಖ ಕಾರ್ಯಗಳು ಶ್ರಮದಾಯಕವಾಗಿದ್ದರೂ ಪೂರ್ಣಗೊಳ್ಳುವುದಿಲ್ಲ. ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ.

*ಮೀನ ರಾಶಿ*
ಸಹೋದರರೊಂದಿಗಿನ ಭೂ ವಿವಾದಗಳು ಬಗೆಹರಿಯುತ್ತವೆ. ಸಮಾಜದಲ್ಲಿ ಪ್ರಸಿದ್ಧ ವ್ಯಕ್ತಿಗಳ ಬೆಂಬಲ ಹೆಚ್ಚಾಗುತ್ತದೆ. ಕೈಗೊಂಡ ಕೆಲಸದಲ್ಲಿ ಕಾರ್ಯ ಸಿದ್ಧಿ ಉಂಟಾಗುತ್ತದೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರೀಕ್ಷೆಗಳು ಈಡೇರುತ್ತವೆ. ಬಾಲ್ಯದ ಗೆಳೆಯರ ಆಗಮನ ಸಂತಸ ತರುತ್ತದೆ. ಮೌಲ್ಯದ ವಸ್ತ್ರ ಆಭರಣಗಳನ್ನು ಖರೀದಿಸಲಾಗುತ್ತದೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

error: Content is protected !!